Webdunia - Bharat's app for daily news and videos

Install App

ಸಾಲಬಾಧೆ ತಾಳಲಾರದೆ ಮತ್ತೋರ್ವ ರೈತ ಆತ್ಮಹತ್ಯೆ

Webdunia
ಶನಿವಾರ, 27 ಜೂನ್ 2015 (11:50 IST)
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಇಂದು ಜಿಲ್ಲೆಯಲ್ಲಿ ಮತ್ತೋರ್ವ ಅನ್ನದಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. 
 
ಮೃತ ರೈತನನ್ನು ಜಗದೀಶ್ ಕಿಡೇಗಣ್ಣಿ(45) ಎನ್ನಲಾಗಿದ್ದು, ಜಿಲ್ಲೆಯ ಹೂಡಗುಂದ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಸಾಲಬಾಧೆಯಿಂದ ನರಳುತ್ತಿದ್ದ ಈತ ಸಾಲ ತೀರಿಸಲಾಗದೆ ಮನನೊಂದು ತನ್ನ ಹೋಲದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 
 
ಈತನಿಗೆ 5 ಎಕರೆ ಭೂಮಿ ಇದ್ದು, 2.5 ಎಕರೆಯಲ್ಲಿ ವ್ಯವಸಾಯ ಮಾಡುತ್ತಿದ್ದ. ಆದರೆ ಬೆಳೆ ಕೈಗೆಟಕದ ಹಿನ್ನೆಲೆಯಲ್ಲಿ ನಷ್ಟ ಅನುಭವಿಸಿದ್ದ. ಜೆತೆಗೆ ಎಡಿಬಿಐ ಬ್ಯಾಕ್‌ನಲ್ಲಿ 2.5 ಲಕ್ಷ ಸಾಲ ಮಾಡಿಕೊಂಡಿದ್ದ. ಆದರೆ ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ನೋಟಿಸ್ ಜಾರಿಗೊಳಿಸಿದ್ದರು. ಅಲ್ಲದೆ ಖಾಸಗಿಯವರಿಂದಲೂ ಕೂಡ ಸಾಲ ಮಾಡಿದ್ದ ಎನ್ನಲಾಗಿದ್ದು, ಅವರೂ ಕೂಡ ಸಾಲ ನೀಡುವಂತೆ ದುಂಬಾಲು ಬಿದ್ದಿದ್ದರು. ಇದರಿಂದ ದುಗುಡಕ್ಕೊಳಗಾಗಿ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.   
 
ಈ ಸಂಬಂಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments