Select Your Language

Notifications

webdunia
webdunia
webdunia
webdunia

ಸಾಲಬಾಧೆ ತಾಳಲಾರದೆ ರಾಜ್ಯದಲ್ಲಿ ಮತ್ತೋರ್ವ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರಾಜ್ಯದಲ್ಲಿ ಮತ್ತೋರ್ವ ರೈತ ಆತ್ಮಹತ್ಯೆ
ಹಾಸನ , ಮಂಗಳವಾರ, 7 ಜುಲೈ 2015 (11:54 IST)
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಮುಂದುವರಿದಿದ್ದು, ಇಂದು ಜಿಲ್ಲೆಯಲ್ಲಿ ಮತ್ತೋರ್ವ ರೈತ ನೇಣು ಬಿಗಿದುಕೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾನೆ. 
 
ಮೃತ ರೈತನನ್ನು ತಿಮ್ಮೇಗೌಡ(38) ಎಂದು ಹೇಳಲಾಗಿದ್ದು, ಜಿಲ್ಲೆಯ ಚನ್ನರಾಯಪಟ್ಟ ತಾಲೀಕಿನ ಕುರುವಂಕ ಗ್ರಾಮದ ನಿವಾಸಿಯಾಗಿದ್ದಾನೆ. 
 
ಈತ ಕೆನರಾ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಸುಮಾರು 4 ಲಕ್ಷಕ್ಕೂ ಮೀರಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಇದನ್ನು ತೀರಿಸಲಾಗದೆ ಮನನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. 
 
ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗುತ್ತಿದೆ. 

Share this Story:

Follow Webdunia kannada