Webdunia - Bharat's app for daily news and videos

Install App

ಐಶ್ವರ್ಯ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ - ಕಾಂಗ್ರೆಸ್‌ ಮುಖಂಡನಿಗೂ ಕೋಟಿ ಕೋಟಿ ನಾಮ

Sampriya
ಭಾನುವಾರ, 29 ಡಿಸೆಂಬರ್ 2024 (11:34 IST)
ಮಂಡ್ಯ: ಚಿನ್ನ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಐಶ್ವರ್ಯ ಗೌಡ ವಂಚನೆಯ ಮುಖ ಬಗೆದಷ್ಟು ಹೊರಬರುತ್ತಿದೆ. ಈಕೆಯಿಂದ ಕೋಟಿಗಟ್ಟಲೆ ವಂಚನೆಗೊಳಗಾದ ಕಾಂಗ್ರೆಸ್‌ ಮುಖಂಡರೊಬ್ಬರು ದೂರು ನೀಡಲು ಮುಂದಾಗಿದ್ದಾರೆ.

ಮಾಜಿ ಸಂಸದ ಡಿ.ಕೆ.ಸುರೇಶ್ ನನ್ನ ಸಹೋದರ ಎಂದುಕೊಂಡು ಕೋಟಿಗಟ್ಟಲೇ ವಂಚನೆ ಮಾಡಿ ಇದೀಗ ಈ ಐಶ್ವರ್ಯ ಗೌಡ ಜೈಲು ಸೇರಿದ್ದಾಳೆ. ವನಿತಾ ಐತಾಳ ನೀಡಿರುವ ದೂರಿನ ಮೇರೆಗೆ ವಂಚಕಿ ಐಶ್ವರ್ಯ ಗೌಡಳನ್ನು ಇದೀಗ ಪೊಲೀಸರು ಬಂಧನ ಮಾಡಿದ್ದಾರೆ.

ವನಿತಾಗೆ ಮಾತ್ರವಲ್ಲ ಹಲವು ಜನರಿಗೆ ಐಶ್ವರ್ಯ ಗೌಡ ಉರುಫ್ ನವ್ಯಶ್ರೀ ಕೋಟಿಗಟ್ಟಲೇ ಮಹಾದೋಖಾ ಮಾಡಿರೋದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ.  

ಬಿಲ್ಡರ್, ಚಿನ್ನದ ವ್ಯಾಪಾರಿ ಕಮ್ ಕಾಂಗ್ರೆಸ್ ಮುಖಂಡನಿಗೂ ಸಹ ಕೋಟ್ಯಂತರ ರೂಪಾಯಿ ಟೋಪಿ ಹಾಕಿರೋದು ಬೆಳಕಿಗೆ ಬಂದಿದೆ. ಸದ್ಯ ಆ ಉದ್ಯಮಿ ತನ್ನ ಹೆಸರು ಬಹಿರಂಗಪಡಿಸಬೇಡಿ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ವಾಸವಿರುವ ಆತ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಾ ಆತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಐಶ್ವರ್ಯ ಗೌಡ ಈ ವ್ಯಕ್ತಿಯಿಂದ 6.5 ಕೋಟಿ ಹಣ ಹಾಗೂ ಒಂದಷ್ಟು ಗೋಲ್ಡ್‌ನ್ನು ಪಡೆದಿದ್ದಾಳೆ ಎನ್ನಲಾಗಿದೆ.

ಕಾಂಗ್ರೆಸ್ ಮುಖಂಡನಿಗೆ ಒಂದೂವರೆ ವರ್ಷದ ಹಿಂದೆ ಐಶ್ವರ್ಯ ಗೌಡ ಪರಿಚಯವಾಗಿದ್ದಾಳೆ. ಐಷಾರಾಮಿ ಕಾರು, ಬೌನ್ಸರ್, ಗನ್‌ಮ್ಯಾನ್ ಜೊತೆಗೆ ಬಂದು ಆ ಉದ್ಯಮಿಯನ್ನು ಪರಿಚಯ ಮಾಡಿಕೊಂಡಿದ್ದಾಳೆ. ನಂತರ ಇವರಿಬ್ಬರು ಸೇರಿ ರಿಯಲ್ ಎಸ್ಟೇಟ್ ವ್ಯವಹಾರವನ್ನು ಮಾಡಿದ್ದಾರೆ. ಐಶ್ವರ್ಯ ಗೌಡ ಮೇಲೆ ಮಂಡ್ಯ ಅಥವಾ ಬೆಂಗಳೂರಿನಲ್ಲಿ ದೂರು ದಾಖಲು ಮಾಡಲು ದಾಖಲೆ ಸಮೇತ ಸಿದ್ಧರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments