Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‍ನ ಮತ್ತೊಬ್ಬ ಅತೃಪ್ತ ಶಾಸಕ ಮುಂಬೈಗೆ ಶಿಫ್ಟ್

ಕಾಂಗ್ರೆಸ್‍ನ ಮತ್ತೊಬ್ಬ ಅತೃಪ್ತ ಶಾಸಕ ಮುಂಬೈಗೆ ಶಿಫ್ಟ್
ಬೆಂಗಳೂರು , ಬುಧವಾರ, 16 ಜನವರಿ 2019 (10:46 IST)
ಬೆಂಗಳೂರು : ಕಾಂಗ್ರೆಸ್‍ನ ಮತ್ತೊಬ್ಬ ಅತೃಪ್ತ ಶಾಸಕರು ಮುಂಬೈಗೆ ಶಿಫ್ಟ್ ಆಗಿದ್ದು ಈ ಮೂಲಕ ದೋಸ್ತಿ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ.


ಈಗಾಗಲೇ ಮಾಜಿ ಅರಣ್ಯ ಸಚಿವ, ಕೆಪಿಜೆಪಿ ಪಕ್ಷದ ನಾಯಕ ಆರ್. ಶಂಕರ್ ಮತ್ತು ಮುಳಬಾಗಿಲು ಕ್ಷೇತ್ರದ ಶಾಸಕ ಹೆಚ್. ನಾಗೇಶ್ ಅವರು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದಾರೆ. ಆದರೆ ಇದೀಗ ಅತೃಪ್ತ  ಶಾಸಕರಾದ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ ಮುಂಬೈ ಶಿಫ್ಟ್ ಆಗಿದ್ದಾರೆ.


ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಮಂಗಳವಾರ ಸಂಜೆ ಮುಂಬೈಗೆ ತೆರಳಿದ್ದಾರೆ. ಶಾಸಕರು ಹಾಗೂ ಪಕ್ಷದ ನಾಯಕರ ನಡುವೆ ಭಿನ್ನಮತ ಕಾಣಿಸಿಕೊಂಡಿದ್ದು, ಈಗಾಗಲೇ ಮುಂಬೈನ ಖಾಸಗಿ ಹೋಟೆಲ್ ನಲ್ಲಿರುವ ಆರು ಜನ ಶಾಸಕರನ್ನು ಪ್ರತಾಪ್ ಗೌಡ ಸೇರಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನರೇಂದ್ರ ಮೋದಿ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳು