Webdunia - Bharat's app for daily news and videos

Install App

ವಿಬ್‌ಗಯಾರ್ ಶಾಲೆಯಲ್ಲಿ ಮತ್ತೆರಡು ಚಿರತೆಗಳು ಪ್ರತ್ಯಕ್ಷ?

Webdunia
ಬುಧವಾರ, 10 ಫೆಬ್ರವರಿ 2016 (10:22 IST)
ಕಳೆದ ರವಿವಾರ ಚಿರತೆ ಕಾಣಿಸಿಕೊಂಡಿದ್ದ ಮಾರತಹಳ್ಳಿ ಸಮೀಪದ ವಿಬ್‌ಗಯಾರ್‌ ಶಾಲಾ ಆವರಣದಲ್ಲಿ ಮತ್ತೆರಡು ಚಿರತೆಗಳು ಕಾಣಿಸಿಕೊಂಡಿವೆ ಎಂಬುದು ವದಂತಿ ಎಂದು ಹೇಳಲಾಗುತ್ತಿದೆ.

ಕಳೆದ ರವಿವಾರ ಚಿರತೆಯೊಂದು ಶಾಲೆಯಲ್ಲಿ ಕಾಣಿಸಿಕೊಂಡು ಆತಂಕವನ್ನು ಸೃಷ್ಟಿಸಿತ್ತು. ಆ ಘಟನೆಯಿಂದ ಸುತ್ತಮುತ್ತಲಿನ ನಿವಾಸಿಗಳು ಇನ್ನು ಹೊರಬಂದಿಲ್ಲ. ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಹೀಗಿರುವಾಗ ಮತ್ತೆರಡು ಚಿರತೆಗಳು ಅದೇ ಸ್ಥಳದಲ್ಲಿ ಕಾಣಿಸಿಕೊಂಡಿವೆ ಎಂಬ ವದಂತಿ ಹಬ್ಬಿದೆ.
 
ವಿಬ್‌ಗಯಾರ್‌‌ ಶಾಲೆಯ ಬಳಿ ಇರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರೊಬ್ಬರು ತಾವು ನಿನ್ನೆ ಸಂಜೆ 7. 30ರ ಸುಮಾರಿಗೆ ಚಿರತೆ  ಕಾಣಿಸಿಕೊಂಡಿದೆ ಎಂದು ಹೇಳಿದ್ದರು. ಆದರೆ ಈ ಕುರಿತು ಅವರಿಗೆ ಸ್ಪಷ್ಟನೆ ಇಲ್ಲ. ಆದರೂ ಮುಂಜಾಗೃತಾ ಕ್ರಮವಾಗಿ ಅರಣ್ಯ ಅಧಿಕಾರಿಗಳು ಶಾಲೆಯ ಹಿಂಬದಿ ಇರುವ ನೀಲಗಿರಿ ತೋಪಿನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. 
 
ಶಾಲೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ.
 
ಮಕ್ಕಳ ಸುರಕ್ಷತಾ ದೃಷ್ಠಿಯಿಂದ ಶಾಲೆಗೂ ಸಹ ಇಂದು ರಜೆ ಘೋಷಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments