ಭ್ರಷ್ಟಾಚಾರದ ಇನ್ನೊಂದು ಹೆಸರು ಕಾಂಗ್ರೆಸ್ ಕಟೀಲ್ ವಾಗ್ದಾಳಿ

Webdunia
ಮಂಗಳವಾರ, 11 ಅಕ್ಟೋಬರ್ 2022 (13:17 IST)
ಹಾವೇರಿ : ದೇಶದಲ್ಲಿ ಭ್ರಷ್ಟಾಚಾರವನ್ನು ಪ್ರಾರಂಭ ಮಾಡಿದ್ದೆ ಕಾಂಗ್ರೆಸ್. ಭ್ರಷ್ಟಾಚಾರದ ಒಂದು ಫಲಾನುಭವಿ ರಾಹುಲ್ ಗಾಂಧಿಯಾಗಿದ್ದು, ಅದಕ್ಕೋಸ್ಕರ ಬೇಲ್ನಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಹಾವೇರಿಯ ಹುಕ್ಕೇರಿಮಠದ ಸದಾಶಿವ ಶ್ರೀ ಆಶೀರ್ವಾದ ಪಡೆದು ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರವನ್ನು ಪ್ರಾರಂಭ ಮಾಡಿದ್ದೆ ಈ ರಾಹುಲ್ ಗಾಂಧಿಯವರ ತಾತ. ಭಯೋತ್ಪಾದನೆಯ ಇನ್ನೊಂದು ಹೆಸರು ಕಾಂಗ್ರೆಸ್ಸೇ ಆಗಿದೆ ಎಂದರು.

ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಮೂಗಿಗೆ ತುಪ್ಪ ಸವರೋ ಕೆಲಸ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರು ಬಹುಮತ ಪಡೆದು ಐದು ವರ್ಷ ಮುಖ್ಯಮಂತ್ರಿ ಆಗಿದ್ದರು.

ಅಷ್ಟೇ ಅಲ್ಲದೇ ಅವರು ಅಹಿಂದ್ ಹೋರಾಟ ಮಾಡಿ ಆ ಕೋಟಾದ ಭೀಕ್ಷೆಯಲ್ಲಿ ಮುಖ್ಯಮಂತ್ರಿ ಆಗಿದ್ದರು. ಆದರೂ ಆಗ ಹಿಂದುಳಿದ ಸಮಾಜಗಳಿಗೆ ನ್ಯಾಯ ಕೊಡದಿದ್ದವರು, ಈಗ ಮೀಸಲಾತಿ ಕೊಟ್ಟಾಗ ಅಸಮಾಧಾನದ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments