Webdunia - Bharat's app for daily news and videos

Install App

ಬಜೆಟ್ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಗೆ ಸಜ್ಜಾಗಿ

Krishnaveni K
ಗುರುವಾರ, 6 ಮಾರ್ಚ್ 2025 (16:44 IST)
ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2025 ರನ್ನು ಮಂಡಿಸಲಿದ್ದು ಬಜೆಟ್ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಗೆ ನೀವು ಸಜ್ಜಾಗಬೇಕಿದೆ.

ಈಗಾಗಲೇ ರಾಜ್ಯ ಸರ್ಕಾರ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಸರ್ಕಾರೀ ಸ್ವಾಮ್ಯದ ಬಸ್ ಗಳ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿದೆ. ಇದರ ಜೊತೆಗೆ ಮೆಟ್ರೋ ಪ್ರಯಾಣ ದರವೂ ಹೆಚ್ಚಾಗಿದೆ.

ಇದೀಗ ರಾಜ್ಯ ಸರ್ಕಾರ ನಂದಿನಿ ಹಾಲಿನ ದರ ಏರಿಕೆಗೆ ಮುಂದಾಗಿದೆ. ಈಗಾಗಲೇ ಕೆಎಂಎಫ್ ದರ ಏರಿಕೆಗೆ ಸರ್ಕಾರದ ಮುಂದೆ ಪ್ರಸ್ತಾವನೆಯಿಟ್ಟಿದೆ. ಈ ಬಜೆಟ್ ಘೋಷಣೆಯಾದ ಬಳಿಕ ನಂದಿನಿ ಹಾಲಿನ ದರದಲ್ಲೂ ಏರಿಕೆಯಾಗಲಿದೆ ಎಂದು ವರದಿಯಾಗಿದೆ.

ಪ್ರತೀ ಲೀಟರ್ ಗೆ 5 ರೂ.ಗಳಷ್ಟು ದರ ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಇಡಲಾಗಿದೆ. ಈ ಹಣ ರೈತರಿಗೆ ಸೇರಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಹೀಗಾಗಿ ಬಜೆಟ್ ಬೆನ್ನಲ್ಲೇ ನಂದಿನಿ ದರ ಹೆಚ್ಚಳವಾಗುವುದು ಗ್ಯಾರಂಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments