Select Your Language

Notifications

webdunia
webdunia
webdunia
Monday, 7 April 2025
webdunia

ಕಾಂಗ್ರೆಸ್ ವಿರುದ್ಧ ಬೇಸರ ವ್ಯಕ್ತಪಡಿಸಿದ ಮತ್ತೊಬ್ಬ ಹಿರಿಯ ಶಾಸಕ

ಕಾಂಗ್ರೆಸ್
ದಾವಣಗೆರೆ , ಸೋಮವಾರ, 8 ಜುಲೈ 2019 (17:09 IST)
ರಾಜ್ಯ ರಾಜಕೀಯದಲ್ಲಿ ಇಷ್ಟೆಲ್ಲಾ ಗೊಂದಲ ನಡೆಯುತ್ತಿದೆ. ಆದರೆ ನನಗೆ ಬೆಂಗಳೂರಿಗೂ ಬಾ ಅಂತಾ ಯಾರೂ ಕರೆದಿಲ್ಲ. ಹೀಗಂತ ಕಾಂಗ್ರೆಸ್ ನ ಹಿರಿಯ ಶಾಸಕ ತಮ್ಮ ಅಸಮಧಾನವನ್ನು ಹೊರಹಾಕಿದ್ದಾರೆ.

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಹೇಳಿಕೆ ನೀಡಿದ ಶಾಸಕ ಶಾಮನೂರ ಶಿವಶಂಕ್ರಪ್ಪ, ನಾನು ಬೆಂಗಳೂರಿಗೆ ಹೋಗಲ್ಲ. ನನಗೆ ಯಾರೂ ಕರೆದಿಲ್ಲ. ಸದ್ಯಕ್ಕೆ ಸರ್ಕಾರ ಏನು ಆಗುತ್ತದೆ ಅಂತಾ ಹೇಳುವುದು ಕಷ್ಟ.  ಸಿದ್ದರಾಮಯ್ಯ ಅಥವಾ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಿತ್ತಾರೆ ಎಂಬುದು ಸುಳ್ಳು ಸುದ್ದಿ. ಹೆಚ್.ಡಿ.ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಸಾಧ್ಯತೆ ಇದೆ. ಕಾದು ನೋಡಬೇಕು ಎಂದ್ರು.

ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಬಗ್ಗೆ ಪದೇ ಪದೇ ಪ್ರಶ್ನೆ ಕೇಳುವುದು ನಿಲ್ಲಿಸಿ ಎಂದು ಮಾಧ್ಯಮದವರಿಗೆ ವಿನಂತಿಸಿದರು ಶಾಮನೂರ ಶಿವಶಂಕರಪ್ಪ.



Share this Story:

Follow Webdunia kannada

ಮುಂದಿನ ಸುದ್ದಿ

ಅತೃಪ್ತ ಶಾಸಕರು ಮುಂಬೈಗೆ – ಜೆಡಿಎಸ್ ಶಾಸಕರು ಈ ರೆಸಾರ್ಟ್ ಗೆ?