Webdunia - Bharat's app for daily news and videos

Install App

ವಿಶ್ವವಿದ್ಯಾಲಯದಲ್ಲಿ ಮುಂದುವರೆದ ಮತ್ತೊಂದು ಸರಣಿ ಅಪಘಾತ

Webdunia
ಸೋಮವಾರ, 21 ನವೆಂಬರ್ 2022 (18:13 IST)
ವಿಶ್ವವಿದ್ಯಾಲಯದ ರಸ್ತೆಯಲ್ಲಿ ಮತ್ತೆ ಸರಣಿ ಅಪಘಾತ ಸಂಭವಿಸಿದೆ.ಶಿಲ್ಪ ಶ್ರೀ ಸಾವಿನ ಬಳಿಕ ಒಂಬತ್ತನೇ ಅಪಘಾತ ಇದ್ದಾಗಿದ್ದು,ಅಪಘಾತ ತಡೆಗೆ ಹಲವಾರು ಕ್ರಮಗಳನ್ನು ಕೈಗೊಂಡರು ಸಹ ಅಪಘಾತಗಳು ಮುಂದುವರೆಯುತ್ತಿದೆ.
 
 ವಿವಿ ಕೇಂದ್ರ ಕಚೇರಿ ಮತ್ತು ನಾಗರಭಾವಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅಪಘಾತ ನಡೆದಿದ್ದು,ಸಂವಹನ ಮತ್ತು ಬಯೋಟೆಕ್ ವಿಭಾಗದ ಮುಂದೆ ರಸ್ತೆ ಹುಬ್ಬುಗಳು ಇಲ್ಲದ ಕಾರಣ ನಡೆದಿರುವ ಅಪಘಾತ.ಪ್ರಧಾನಿ ಮೋದಿ ಕಾರ್ಯಕ್ರಮದಿಂದಾಗಿ ತೆರವುಗೊಳಿಸಿದ್ದ ಹಂಪ್ ಗಳು.ಕಾರ್ಯಕ್ರಮ ಮುಗಿದು ನಾಲ್ಕು ತಿಂಗಳಾದರೂ ಹಂಪ್  ಮರು ನಿರ್ಮಾಣವನ್ನ ಬಿಬಿಎಂಪಿ ಮಾಡಿಲ್ಲ.ಬಿಬಿಎಂಪಿ ನಿರ್ಲಕ್ಷದಿಂದಾಗಿ ಪ್ರತಿನಿತ್ಯ  ಆಕ್ಸಿಡೆಂಟ್ ಗಳು ಏರುತ್ತಿದೆ.ಹಲವಾರು ಬಾರಿ ಬಿಬಿಎಂಪಿ ಗಮನಕ್ಕೆ ತಂದರು  ಸಮಸ್ಯೆ ಬಗೆಹರಿಸಲು  ಬಿಬಿಎಂಪಿ ಮುಂದಾಗುತ್ತಿಲ್ಲ.
 
ಬಿಬಿಎಂಪಿಯ ಬೇಜವಾಬ್ದಾರಿ ಇಂದ ರಸ್ತೆ ಸುರಕ್ಷತೆ ಕುಗ್ಗುತ್ತಿದೆ.ವಾಹನ ದಟ್ಟಣೆಯಿಂದಾಗಿ ರಸ್ತೆದಾಟಲು  ಪ್ರತಿನಿತ್ಯ  ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ‌.ಇಂದು ಬೆಳಗ್ಗೆ ಸುಮಾರು 12 ಗಂಟೆಯಲ್ಲಿ ಅಪಘಾತ ಸಂಭವಿಸಿದ್ದು,ಸ್ವಿಫ್ಟ್ ಮತ್ತು ಸ್ವಿಫ್ಟ್ ಡಿಸೈರ್ ನಡುವೆ  ಅಪಘಾತ ಸಂಭವಿಸಿದೆ.ಬಯೋಟೆಕ್ ವಿಭಾಗದ ಮುಂದೆ ಮುಖಾಮುಖಿ ವಾಹನಗಳು ಎದುರಾಗಿದೆ. ಬಯೋಟೆಕ್ ಪ್ರಾಧ್ಯಾಪಕಿಯು ಬುಕ್ ಮಾಡಿದ ಯಲ್ಲೋ ಬೋರ್ಡ್ ವಾಹನ ರಭಸದಿಂದ ಬಂದಂತಹ ಖಾಸಗಿ ವಾಹನದಿಂದ ಡಿಕ್ಕಿ ಹೊಡೆದಿದೆ.ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

India Pakistan: ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು 400 ಅಲ್ಲ, ಇನ್ಯಾರು

Gruhalakshmi: ಮೂರು ತಿಂಗಳಿನಿಂದ ಬಂದಿಲ್ಲ ಗೃಹಲಕ್ಷ್ಮಿ ಹಣ: ವೋಟ್ ಹಾಕಲ್ಲ ಎಂದ ಮಹಿಳೆಯರು

ಮುಂದಿನ ಸುದ್ದಿ
Show comments