Webdunia - Bharat's app for daily news and videos

Install App

ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ: ಸ್ನೇಹಮಯಿ ಕೃಷ್ಣ ದೂರು ದಾಖಲು

Sampriya
ಮಂಗಳವಾರ, 4 ಫೆಬ್ರವರಿ 2025 (19:46 IST)
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಮೈಸೂರು ಲೋಕಾಯುಕ್ತ ಎಸ್ಪಿ ಅವರಿಗೆ ಮತ್ತೊಂದು ದೂರು ಸಲ್ಲಿಸಿ, ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಕುಟುಂಬಕ್ಕೆ ಕೆಸರೆ ಗ್ರಾಮದ 3.16 ಎಕರೆ ಜಾಗವನ್ನು ಅರಿಶಿನ ಕುಂಕುಮ ರೂಪದಲ್ಲಿ ಸಿದ್ದರಾಮಯ್ಯ ಪತ್ನಿಗೆ ಅವರ ಸೋದರ ಮಲ್ಲಿಕಾರ್ಜುನ್‌ ಸ್ವಾಮಿ ದಾನ ಮಾಡಿದಂತೆಯೇ, 1983ರಲ್ಲಿ ಆಲನಹಳ್ಳಿ ಸರ್ವೆ ನಂಬರ್‌ 113/4ರಲ್ಲಿ ಒಂದು ಎಕರೆ ಭೂಮಿ ಖರೀದಿ ಮಾಡಿದ್ದಾರೆ. ಆ ಭೂಮಿಗೆ 1996ರಲ್ಲಿ ಮುಡಾ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಡಿನೋಟಿಫೈ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಪ್ರಭಾವ ಬೀರಿ ಡಿನೋಟಿಫೈ ಮಾಡಲಾಗಿದೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಇದೇ ಒಂದು ಎಕರೆ ಭೂಮಿಯನ್ನು ಮಲ್ಲಿಕಾರ್ಜುನ್‌ ಸ್ವಾಮಿ 2010ರ ಅಕ್ಟೋಬರ್​​ನಲ್ಲಿ ಸಿಎಂ ಪತ್ನಿಗೆ ದಾನ ಮಾಡಿದ್ದಾರೆ. ಆ ಭೂಮಿಯನ್ನು ಒಂದೇ ತಿಂಗಳಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೆಸರಿಗೆ ದಾನ ಮಾಡಲಾಗಿದೆ. ಬಳಿಕ ಭೂಮಿಯನ್ನು ಯತೀಂದ್ರ ಸಿದ್ದರಾಮಯ್ಯ ದಾನ ಪಡೆದ ನಾಲ್ಕು ತಿಂಗಳಲ್ಲೇ ಬೇರೆಯವರಿಗೆ ಮಾರಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಸಿದ್ದರಾಮಯ್ಯ ಎಲ್ಲಿಯೂ ದಾಖಲೆಗಳಲ್ಲಿ ತಿಳಿಸಿಲ್ಲ. ಹಾಗಾಗಿ, ಸಿದ್ದರಾಮಯ್ಯ ಕುಟುಂಬ, ಮಲ್ಲಿಕಾರ್ಜುನ ಸ್ವಾಮಿ ಹೆಸರಿನಲ್ಲಿ ಆಸ್ತಿ ಖರೀದಿ ಮಾಡಿರುವ ಶಂಕೆ ಇದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಮಲ್ಲಿಕಾರ್ಜುನ್‌ ಸ್ವಾಮಿ ಪದೇ ಪದೆ ಆಸ್ತಿಗಳನ್ನು ತಮ್ಮ ಸಹೋದರಿಗೆ ದಾನ ನೀಡುವುದು ಯಾಕೆ? ಅವರ ಬಳಿ ಎಷ್ಟು ಭೂಮಿ ಇದೆ ಹಾಗೂ ಹೀಗೆ ದಾನ ಪಡೆದ ಭೂಮಿಯನ್ನು ತಕ್ಷಣ ಮಾರುವುದು ಯಾಕೆ? ಎಂಬ ಎಲ್ಲಾ ವಿಚಾರಗಳ ಬಗ್ಗೆ ಲೋಕಾಯುಕ್ತ ತನಿಖೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ನಡೆಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments