Webdunia - Bharat's app for daily news and videos

Install App

ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆ: ಮಾಜಿ ಸಂಸದನಿಗೆ ಪರಪ್ಪನ ಅಗ್ರಹಾರವೇ ಗತಿ

Sampriya
ಮಂಗಳವಾರ, 22 ಏಪ್ರಿಲ್ 2025 (17:05 IST)
Photo Courtesy X
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರ ಪ್ರಕರಣ ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಮತ್ತೊಂದು ಹಿನ್ನಡೆಯಾಗಿದೆ.

ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.  

ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ​ ಜಡ್ಜ್​ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಹೀಗಾಗಿ ಪ್ರಜ್ವಲ್​ ರೇವಣ್ಣಗೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ.

ಕೆ.ಆರ್‌. ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.  

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳು ಹೈಕೋರ್ಟ್​ನಲ್ಲಿ ವಜಾಗೊಂಡಿವೆ. ಅಲ್ಲದೇ ಸುಪ್ರೀಂಕೋರ್ಟ್​ನಲ್ಲೂ ಸಹ ವಜಾಗೊಂಡಿತ್ತು. ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್​ ರೇವಣ್ಣ ಅವದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು. ಈ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದೂರು ದಾಖಲಿಸಿದರು.  ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್​ಐಟಿ ತಂಡ ರಚಿಸಿತ್ತು. ಪ್ರಕರಣದ ತನಿಖೆ ನಡೆಸಿದ ಎಸ್​ಐಟಿ 1,632 ಪುಟಗಳ ಚಾರ್ಚ್​​ಶೀಟ್​​ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ​ ಸಲ್ಲಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್‌ ವಾತಾವರಣ ಹಾಳು ಮಾಡಿದ ವಕೀಲನಿಗೆ ₹5 ಲಕ್ಷ ದಂಡ ವಿಧಿಸಿ ಬುದ್ಧಿ ಕಲಿಸಿದ ಸುಪ್ರೀಂ ಕೋರ್ಟ್‌

ಯುಪಿಎಸ್‌ಸಿ ಫಲಿತಾಂಶ ಪ್ರಕಟ: 1009 ಮಂದಿ ನೇಮಕಾತಿ, ಟಾಪರ್‌ ಶಕ್ತಿ ದುಬೆ ಓದಿದ್ದೇನು ಗೊತ್ತಾ

ಶರಬತ್‌ ಜಿಹಾದ್‌ ಹೇಳಿಕೆಗೆ ಸ್ವೀಕಾರರ್ಹವಲ್ಲ: ಬಾಬಾ ರಾಮ್‌ದೇವ್‌ ವಿರುದ್ಧ ಡೆಲ್ಲಿ ಹೈಕೋರ್ಟ್‌ ಗರಂ

Wing commander assault: ಭಾಷೆ ವಿಚಾರಕ್ಕೆ ಇನ್ನೊಬ್ಬರ ಮೇಲೆ ಹಲ್ಲೆ ನಡೆಸುವ ಸಣ್ಣ ಬುದ್ಧಿ ಕನ್ನಡಿಗರದ್ದಲ್ಲ: ಸಿದ್ದರಾಮಯ್ಯ ಗುಡುಗು

ವಿದೇಶಗಳಲ್ಲಿ ರಾಷ್ಟ್ರ ಗೌರವಕ್ಕೆ ಧಕ್ಕೆ ತಂದ ರಾಹುಲ್ ಗಾಂಧಿ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ