ಡೇಂಘಿಗೆ ಉತ್ತರ ಕನ್ನಡದಲ್ಲಿ ಮತ್ತೊಬ್ಬರು ಬಲಿ

Webdunia
ಮಂಗಳವಾರ, 24 ಅಕ್ಟೋಬರ್ 2023 (14:40 IST)
ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ. ಅಲ್ಲದೆ ಇಂದು ಡೆಂಗ್ಯೂಗೆ ಮತ್ತೊಬ್ಬರು ಬಲಿಯಾಗಿದ್ದು ಇಡೀ ಜಿಲ್ಲೆಯಲ್ಲಿ ಆತಂಕ ಆವರಿಸಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಎರಡನೇ ಬಲಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಖಾಜಿಯಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಮೀರಾನ್ ಸಾದಾ ಎಂಬುವವರು ಡೆಂಗ್ಯೂ ಜ್ವರಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೀರಾನ್, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾರೆ. ನಿನ್ನೆಯಷ್ಟೇ ಡೆಂಗ್ಯೂ ಜ್ವರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ ಎಂದು ವರದಿಯಾಗಿತ್ತು. ಇಂದು ಚಿಕತ್ಸೆ ಫಲಿಸದೆ ಮತ್ತೊಬ್ಬರು ಪ್ರಾಣ ಬಿಟ್ಟಿದ್ದಾರೆ. ನಿನ್ನೆ ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ ಎಂಬ ಹದಿಹರೆಯದ ಯುವಕ ಡೆಂಗ್ಯೂಗೆ ಪ್ರಾಣ ಕಳೆದುಕೊಂಡಿದ್ದ. ಮೃತ ಗೋವಿಂದ ಸಾಗರಶ್ರೀ ಬೋಟ್‌ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದ. ಕಳೆದ ಒಂದು ವಾರದಿಂದ ಗೋವಿಂದನಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ಮೃತಪಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments