Select Your Language

Notifications

webdunia
webdunia
webdunia
webdunia

ಪಕ್ಷ ವಿರೋಧಿಗಳ ವಿರುದ್ಧ ಮುಲಾಜಿಲ್ಲದ ಕ್ರಮ- ಜಿ.ಪರಮೇಶ್ವರ್

ಪಕ್ಷ ವಿರೋಧಿಗಳ ವಿರುದ್ಧ ಮುಲಾಜಿಲ್ಲದ ಕ್ರಮ- ಜಿ.ಪರಮೇಶ್ವರ್
ತುರುವೇಕೆರೆ , ಶುಕ್ರವಾರ, 5 ಜನವರಿ 2018 (09:06 IST)

ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿರುದ್ಧ ನಡೆದುಕೊಂಡರೆ ಅಂತಹವರು ಎಷ್ಟೇ ದೊಡ್ಡವರಾದರೂ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ತುರುವೇಕೆರೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ತುರುವೇಕೆರೆಗೆ ಟಿಕೆಟ್ ಯಾರಿಗೆ ನೀಡುತ್ತೇವೆ ಗೊತ್ತಿಲ್ಲ. ಯಾರಿಗೆ ಟಿಕೆಟ್ ಸಿಕ್ಕರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನಮಗೆ ಕಾಂಗ್ರೆಸ್ ಗೆಲ್ಲುವುದು ಮುಖ್ಯವಾಗಿದ್ದು, ಪಕ್ಷ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಬಿಜೆಪಿಯವರು ಕೊಮುಗಲಭೆ ಸೃಷ್ಟಿಸಿ ಸಮಾಜದ ನೆಮ್ಮದಿ ಕೆಡಿಸಿ ಅಧಿಕಾರ ಹಿಡಿಯುವ ಹುನ್ನಾರ ಮಾಡುತ್ತಿದ್ದಾರೆ. ಇನ್ನು ಜೆಡಿಎಸ್ನವರಿಗೆ ಸ್ಪಷ್ಟವಾದ ಅಜೆಂಡಾಗಳೇ ಇಲ್ಲ. ನಮ್ಮ ಸರ್ಕಾರ ಬಡಪರ ಯೋಜನೆಗಳನ್ನು ಜಾರಿಗೊಳಿಸಿದರೆ. ಜೆಡಿಎಸ್ನವರು ಅದರ ವಿರುದ್ಧ ಮಾತನಾಡುತ್ತಾ ಬಡವರ ಹೊಟ್ಟೆ ಮೇಲೆ ಹೊಡೆಯಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಜನರಿಂದ ಪೊರಕೆ ಏಟು ತಿನ್ನುತ್ತೇನೆ- ಡಿಕೆಶಿ ಸಿ.ಪಿ.ಯೋಗೀಶ್ವರಗೆ ತಿರುಗೇಟು