Select Your Language

Notifications

webdunia
webdunia
webdunia
webdunia

ಕಪ್ಪು ಹಣ ಪತ್ತೆ ಪ್ರಕರಣ: ಬೆಂಗಳೂರಿನ 10 ಕಡೆ ಎಸಿಬಿ ದಾಳಿ

ಕಪ್ಪು ಹಣ ಪತ್ತೆ ಪ್ರಕರಣ: ಬೆಂಗಳೂರಿನ 10 ಕಡೆ ಎಸಿಬಿ ದಾಳಿ
ಬೆಂಗಳೂರು , ಗುರುವಾರ, 8 ಡಿಸೆಂಬರ್ 2016 (13:13 IST)
ಸರಕಾರಿ ಅಧಿಕಾರಿಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಅವರ ನಿವಾಸಗಳಲ್ಲಿ ದೊರೆತ ಕೋಟಿ ಕೋಟಿ ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಅವರ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
 
ಆರೋಪಿಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಅವರ ಸಂಬಂಧಿಗಳಿರುವ 10 ನಿವಾಸಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಜಯಚಂದ್ರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದಾಗ 2000 ರೂ ಮುಖಬೆಲೆಯ 4.7 ಕೋಟಿ ರೂಪಾಯಿ ಪತ್ತೆಯಾಗಿತ್ತು. ನಂತರ ಜಯಚಂದ್ರ ಮತ್ತು ಚಿಕ್ಕರಾಯಪ್ಪ ಹಾಗೂ ಇಬ್ಬರು ಗುತ್ತಿಗೆದಾರರ ನಿವಾಸಗಳ ಮೇಲೆ ದಾಳಿ ಮಾಡಿದಾಗ ಒಟ್ಟು 152 ಕೋಟಿ ರೂಪಾಯಿಗಳ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗರೂಗೆ ಕಪಾಳಮೋಕ್ಷ: ವೈರಲ್ ವೀಡಿಯೋ