Webdunia - Bharat's app for daily news and videos

Install App

ಶೀಘ್ರ ಭ್ರಷ್ಟಾಚಾರ ಕೇಸ್‌ಗಳ ಇತ್ಯರ್ಥಕ್ಕಾಗಿ ಎಸಿಬಿ ರಚನೆ: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 23 ಮಾರ್ಚ್ 2016 (12:55 IST)
ಲೋಕಾಯುಕ್ತದಲ್ಲಿ ಹಲವು ವರ್ಷಗಳಿಂದ 1600 ಕೇಸ್‌ಗಳು ಬಾಕಿ ಉಳಿದಿವೆ, ಆದ್ದರಿಂದ, ಶೀಘ್ರ ಕೇಸ್‌ಗಳ ಇತ್ಯರ್ಥಕ್ಕಾಗಿ ಎಸಿಬಿ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಇಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ಅನಗತ್ಯವಾಗಿ ಸರಕಾರದ ವಿರುದ್ಧ ಆರೋಪ ಹೊರಿಸುತ್ತಿವೆ. ಯಾವುದೇ ಕಾರಣಕ್ಕೂ ಲೋಕಾಯುಕ್ತ ಇಲಾಖೆಯನ್ನು ದುರ್ಬಲಗೊಳಿಸುವುದಿಲ್ಲ ಎಂದು ಭರವಸೆ ನೀಡಿದರು. 
 
ರಾಜ್ಯ ಸರಕಾರಕ್ಕೆ ಕಾಂಗ್ರೆಸ್ ಶಾಸಕರ ಸಲಹೆ ನೀಡಿದ್ದರಿಂದಲೇ ಎಸಿಬಿ ರಚನೆಯ ತೀರ್ಮಾನವನ್ನು ಸರಕಾರ ತೆಗೆದುಕೊಂಡಿದೆ.ಇದೀಗ ಕಾಂಗ್ರೆಸ್ ಶಾಸಕರಲ್ಲಿದ್ದ ಗೊಂದಲ ನಿವಾರಣೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ವಿಪಕ್ಷಗಳು ಸದನದಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುವಾಗ ಕಾಂಗ್ರೆಸ್ ಪಕ್ಷದ ಶಾಸಕರು ವಿಪಕ್ಷಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments