Webdunia - Bharat's app for daily news and videos

Install App

ಆಸ್ಸಾಂ ಚುನಾವಣೆ ಫಲಿತಾಂಶ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

Webdunia
ಗುರುವಾರ, 19 ಮೇ 2016 (14:27 IST)
ಆಸ್ಸಾಂ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಂದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಬೇಕಾಗಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. 
 
ಪಂಚ ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆ ಫಲಿತಾಂಶ ಹೊರ ಬಿದಿದ್ದು, ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಸಾಂ ರಾಜ್ಯದಲ್ಲಿ ಕಾಂಗ್ರೆಸ್ ಸತತ ಮೂರು ಅವಧಿಯಲ್ಲಿ ಆಡಳಿತ ನಡೆಸಿದ್ದು, ಮತದಾರರು ಬದಲಾವಣೆ ಬಯಸಿ ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆ. ಮತದಾರರ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.
 
ಕಳೆದ 15 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದ ತರುಣ್ ಗೋಗೋಯ್ ನೇತೃತ್ವದ ಸರಕಾರದಲ್ಲಿ ಭಿನ್ನಮತ ಉಂಟಾಗಿದ್ದಲ್ಲದೇ ರಾಜ್ಯದಲ್ಲಿ ಆಡಳಿತ ಸರಕಾರ ವಿರೋಧಿ ಅಲೆ ಎದುರಾಗಿರುವುದೇ ಪಕ್ಷದ ಸೋಲಿಗೆ ಕಾರಣ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಸೋಲಿನ ಕುರಿತು ಸಮರ್ಥನೆ ಮಾಡಿಕೊಂಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ..
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತರ ಬಗ್ಗೆ ಮಾತಿನ ಕಾಳಜಿ ಇದ್ದರೆ ಸಾಲದು: ಛಲವಾದಿ ನಾರಾಯಣಸ್ವಾಮಿ

ಜೇವರ್ಗಿ , ಆಸ್ಪತ್ರೆಯ ದಾಖಲಾತಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ

ಎಐಸಿಸಿ ಹಿಂದುಳಿದ ವರ್ಗಗಳ ಸಭೆಯಲ್ಲಿ ಕೈಗೊಂಡ ನಿರ್ಣಯದ ಮಾಹಿತಿ ನೀಡಿದ ಸಿಎಂ

ಬಂಧನ ಭೀತಿಯಲ್ಲಿ ಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ನೋಡೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments