Webdunia - Bharat's app for daily news and videos

Install App

ಫಲಿತಾಂಶದ ಬಳಿಕ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ : ಈಶ್ವರಪ್ಪ

Webdunia
ಮಂಗಳವಾರ, 16 ಮೇ 2023 (09:44 IST)
ಶಿವಮೊಗ್ಗ : ಚುನಾವಣಾ ಫಲಿತಾಂಶ ಹೊರ ಬಿದ್ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. 5 ಜನರ ವಿರುದ್ಧ ಟಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.

ಬೆಳಗಾವಿ ಕ್ಷೇತ್ರದಲ್ಲಿ ಆಯ್ಕೆಯಾದ ನೂತನ ಕಾಂಗ್ರೆಸ್ ಶಾಸಕ ಅಜೀಜ್ ಶೇಖ್ ಸಹ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಇದನ್ನು ಅವರು ಒಪ್ಪಿಕೊಂಡಂತಾಗಿದೆ. ಭಟ್ಕಳದಲ್ಲಿಯೂ ಈ ರೀತಿ ನಡೆದಿದೆ. ಇದು ಒಳ್ಳೆಯದಲ್ಲ ಎಂದರು.

ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯನವರ ನಡುವೆ ಜಾತಿ ಲಾಬಿ ನಡೆಯುತ್ತಿದೆ. ಡಿಕೆಶಿ ಪರ ಒಕ್ಕಲಿಗರು ಮತ್ತು ಸಿದ್ದರಾಮಯ್ಯನವರ ಪರ ಕುರುಬರ ಲಾಬಿ ನಡೆಯುತ್ತಿದೆ. ಇದು ನೇರವಾಗಿ ಜಾತಿವಾದಿಗಳು ಎಂದು ಒಪ್ಪಿಕೊಂಡಂತಾಗಿದೆ. ಬಿಜೆಪಿಗೆ ಇವರು ಕೋಮುವಾದಿಗಳು ಎನ್ನುತ್ತಿದ್ದರು. ಈಗ ಅವರು ಮಾಡುತ್ತಿರುವುದು ಏನು? ಎಂದು ಪ್ರಶ್ನಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments