Webdunia - Bharat's app for daily news and videos

Install App

ಅನುಪಮಾ ಶೆಣೈ ಏನು ಹೈಕಮಾಂಡ್? ಎಂದು ಗುಡುಗಿದ ಪರಮೇಶ್ವರ್ ನಾಯ್ಕ

Webdunia
ಬುಧವಾರ, 8 ಜೂನ್ 2016 (12:10 IST)
ನನ್ನ ರಾಜೀನಾಮೆಯನ್ನು ಕೇಳಲು ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಏನು ಹೈಕಮಾಂಡ್ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ ಪ್ರಶ್ನಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್ ನಾಯ್ಕ, ನನ್ನ ವಿರುದ್ಧ ಅನುಪಮಾ ಶೆಣೈ ಅವರು ಮೊದಲು ಸಿಡಿ ಬಿಡುಗಡೆ ಮಾಡಲಿ. ನಾನು ಏಕಪತ್ನಿ ವೃತಸ್ಥ ಇದು ನೂರಕ್ಕೆ ನೂರು ಸತ್ಯ. ಇದುವರೆಗೂ ನಾನು ಹಾನಗಲ್ ಗೆಸ್ಟ್ ಹೌಸ್‌ಗೆ ತೆರಳಿಲ್ಲ. ರಾಜಕೀಯದಲ್ಲಿ ನನ್ನ ಏಳಿಗೆ ಸಹಿಸದವರು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
 
ನನ್ನ ರಾಜೀನಾಮೆಯನ್ನು ಕೇಳಲು ಅನುಪಮಾ ಶೆಣೈ ಯಾರು? ನನ್ನ ರಾಜೀನಾಮೆ ಕೇಳಲು ಅವರೇನು ಹೈಕಮಾಂಡ್? ಏನು ತಪ್ಪು ಮಾಡದ ನಾನು ಏಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಅನುಪಮಾ ಶೆಣೈ ಅವರು ಮೊದಲು ನನ್ನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲಿ. ನಂತರ ನನ್ನ ರಾಜೀನಾಮೆ ಕೇಳಲಿ ಎಂದು ಪರಮೇಶ್ವರ್ ನಾಯ್ಕ ಹೇಳಿದರು.
 
ಅವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಕುರಿತು ನಾನು ಭಯಪಡುವ ಅವಶ್ಯಕತೆ ಇಲ್ಲ. ಕಳೆದ 8 ವರ್ಷಗಳಿಂದ ರಾಜಕೀಯದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ವಿರುದ್ಧ ಯಾವ ಆರೋಪಗಳು ಇಲ್ಲ ಎಂದು ಹೇಳಿದ್ದಾರೆ.
 
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರ ರಾಜೀನಾಮೆಗೂ ನನ್ನಗೂ ಯಾವ ಸಂಬಂಧವೂ ಇಲ್ಲ. ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಅವರ ರಾಜೀನಾಮೆ ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ರಾಹುಲ್ ಗಾಂಧಿ ಬಂದಾಯ್ತು, ಪ್ರಧಾನಿ ಮೋದಿ ಯಾಕೆ ಇನ್ನೂ ಪಹಲ್ಗಾಮ್ ಸಂತ್ರಸ್ತರ ಭೇಟಿಯಾಗಿಲ್ಲ

Pahalgam Attack: ನಡೆದ ಘೋರ ಘಟನೆಯನ್ನು ಮೃತ ದಿನೇಶ್ ಪತ್ನಿ ವಿವರಿಸಿದಾಗ ಎಂತವರಿಗೂ ಕಣ್ಣೀರು ಬರಬೇಕು

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದ ವಿನಯ್ ನರ್ವಾಲ್‌ ಪತ್ನಿಗೆ ಮತ್ತಷ್ಟು ನೋವು ತಂದುಕೊಟ್ಟ ವೈರಲ್ ವಿಡಿಯೋ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಮುಂದಿನ ಸುದ್ದಿ
Show comments