Select Your Language

Notifications

webdunia
webdunia
webdunia
webdunia

ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಅನುಪಮಾ ಶೆಣೈ: ರಾಜ್ಯ ರಾಜಕೀಯದಲ್ಲಿ ಕುತೂಹಲ

ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಅನುಪಮಾ ಶೆಣೈ: ರಾಜ್ಯ ರಾಜಕೀಯದಲ್ಲಿ ಕುತೂಹಲ
ಬೆಂಗಳೂರು , ಗುರುವಾರ, 23 ಜೂನ್ 2016 (18:13 IST)
ಬೆಂಗಳೂರು: ಕೂಡ್ಲಿಗಿ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
 
ಬೆಂಗಳೂರು ನಗರದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿರುವ ಕೂಡ್ಲಿಗಿ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ, ರಾಜ್ಯ ಸಚಿವ ಸಂಪುಟದಿಂದ ನಿಮ್ಮನ್ನು ಕೈಬಿಡಬಾರದಿತ್ತು. ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.
 
ರಾಜ್ಯ ಸರಕಾರ ಆತುರದಲ್ಲಿ ನಿಮ್ಮ ರಾಜೀನಾಮೆಯನ್ನು ಅಂಗೀಕರಿಸಿದೆ. ಅಧಿಕಾರಿಗಳ ಕ್ರಮಕ್ಕೆ ನನಗೆ ಬೇಸರ ತಂದಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರಿಗೆ ಹೇಳಿದರು. 
 
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುವವರೆಗೂ ನನ್ನ ಹೋರಾಟ ಮುಂದುವರೆಯಲಿದೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನರೇಂದ್ರಾಸನಕ್ಕೆ ಬಹುಪರಾಕ್; ಪಾಕ್‌ಗೆ ಶವಾಸನ ಮಾಡಿಸೋದು ಯಾವಾಗ?