Webdunia - Bharat's app for daily news and videos

Install App

ಕನ್ನಡ ಭಾಷೆಯ ಮೇಲಿನ ಯಾವುದೇ ದಾಳಿ ಸಹಿಸೋಲ್ಲ: ಸಿಎಂ ಗುಡುಗು

Webdunia
ಸೋಮವಾರ, 31 ಜುಲೈ 2017 (15:59 IST)
ಕನ್ನಡ ಭಾಷೆಯ ಪರವಾಗಿ ತಮ್ಮ ನಿಲುವು ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ, ಕನ್ನಡ ಭಾಷೆಯ ಮೇಲೆ ನಡೆಯುವ ಯಾವುದೇ ದಾಳಿಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. 
 
ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಾಸಿಸಲು ಬಯಸುವವರು ಕನ್ನಡ ಸಂಸ್ಕ್ರತಿಯನ್ನು ಕಲಿಯಬೇಕು. ಭಾಷೆಯ ಮೇಲೆ ದಾಳಿ ಮಾಡಲು ಯತ್ನಿಸಬಾರದು ಎಂದು 14 ನಿಮಿಷಗಳ ವಿಡಿಯೋವನ್ನು ಯು-ಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಸಿದ್ದರಾಮಯ್ಯನನ್ನು "ಕನ್ನಡ ಜನರ ನಾಯಕ ಮತ್ತು ರಕ್ಷಕ" ಎಂದು ತೋರಿಸಲು ವೀಡಿಯೊದಲ್ಲಿ ಪ್ರಯತ್ನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ನೆರೆಯವರು ನಮ್ಮ ಸಹೋದರರು ಮತ್ತು ಸಹೋದರಿಯರು, ನಾವು ಅವರನ್ನು ಪ್ರೀತಿಸಬೇಕು. ಆದರೆ, ನಮ್ಮ ಭಾಷೆಯ, ಭೂಮಿ ಮತ್ತು ನೀರಿನ ಮೇಲೆ ಯಾವುದೇ ಆಕ್ರಮಣವನ್ನು ನಾವು ತಡೆದುಕೊಳ್ಳುವುದಿಲ್ಲ ಎಂಬ ಕಠೋರವಾದ ಸಂದೇಶವನ್ನು ಕಳುಹಿಸುವಲ್ಲಿ ನಾವು ಯಾವುದೇ ಮೀಸಲಾತಿ ಹೊಂದಿರಬಾರದು. ಏಕೆಂದರೆ ಇವುಗಳನ್ನೆಲ್ಲಾ ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
 
ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯ, ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ, ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜಕ್ಕಾಗಿ ಸಮಿತಿ ರಚನೆ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಕನ್ನಡ ಪರ ಪ್ರೇಮವನ್ನು ಮೆರೆದಿದ್ದಾರೆ ಎನ್ನಲಾಗುತ್ತಿದೆ.
 
ಕರ್ನಾಟಕ ಸರಕಾರವು ಬೆಂಗಳೂರು ಮೆಟ್ರೋ ಅಧಿಕಾರಿಗಳಿಗೆ ಪತ್ರ ಬರೆದು ತ್ರೀಭಾಷಾ ಸೂತ್ರವನ್ನು ಕೈಬಿಡುವ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿ ಎಂದು ಕೋರಿದ್ದಾರೆ. 
 
ಇಂದು ನಮ್ಮ ಕನ್ನಡಿಗರು ಭೂಮಿ, ನೀರು ಮತ್ತು ಭಾಷೆ ಬಗ್ಗೆ ಹೆಮ್ಮೆಯನ್ನು ಬೆಳೆಸಿಕೊಳ್ಳಬೇಕು. ನಮ್ಮ ರಾಜ್ಯವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಬೇಕು. ಇದು ನಮ್ಮ ಜವಾಬ್ದಾರಿಯಾಗಿರುತ್ತದೆ ಎಂದು ಕರ್ನಾಟಕ ನಮ್ಮ ಹೆಮ್ಮೆ ಎನ್ನುವ ಶೀರ್ಷಿಕೆಯಿರುವ ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಕನ್ನಡ ಪ್ರೀತಿಯನ್ನು ಮೆರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments