ಯಾವುದೇ ಕಾರಣಕ್ಕೂ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ : ಸೋಮಶೇಖರ್

Webdunia
ಬುಧವಾರ, 21 ಸೆಪ್ಟಂಬರ್ 2022 (09:29 IST)
ಬೆಂಗಳೂರು : ರಾಜ್ಯದಲ್ಲಿ ಯಾವ ರೈತರು ಎಪಿಎಂಸಿ ಕಾಯ್ದೆ ವಾಪಸ್ ಪಡೆಯುವಂತೆ ಮನವಿ ಮಾಡಿಲ್ಲ.

ಹಾಗಾಗಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ನಾಗರಾಜ್ ಯಾದವ್ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ರದ್ದು ಮಾಡಬೇಕು, ಈ ಕಾಯ್ದೆಯಿಂದ ರೈತರಿಗೆ ಅನ್ಯಾಯ ಆಗುತ್ತದೆ.

ಕೇಂದ್ರ ಸರ್ಕಾರ ಈಗಾಗಲೇ ಕಾಯ್ದೆ ರದ್ದು ಮಾಡಿದೆ. ಡಬಲ್ ಎಂಜಿನ್ ಸರ್ಕಾರ ಇಲ್ಲಿ ಬೇರೆ ನಿರ್ಧಾರ ಮಾಡಿದೆ. ಕೂಡಲೇ ಕಾಯ್ದೆ ರದ್ದು ಮಾಡಬೇಕೆಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಎಸ್.ಟಿ ಸೋಮಶೇಖರ್, ಯಾವುದೇ ಕಾರಣಕ್ಕೂ ಎಪಿಎಂಸಿ ಕಾಯ್ದೆ ರಾಜ್ಯದಲ್ಲಿ ವಾಪಸ್ ಪಡೆಯಲ್ಲ (ರದ್ದು ಮಾಡುವುದಿಲ್ಲ) ಎಂದು ಪುನರುಚ್ಚರಿಸಿದರು. 

ಕೇಂದ್ರದ ಕಾಯ್ದೆ ಬೇರೆ ನಮ್ಮ ಕಾಯ್ದೆ ಬೇರೆ. ರೈತರಿಗೆ ಅನುಕೂಲ ಮಾಡಲು ಕಾಯ್ದೆ ತಿದ್ದುಪಡಿ ಮಾಡಿದ್ದೇವೆ. ರೈತರು ತಮ್ಮ ಬೆಳೆ ಎಪಿಎಂಸಿಯಲ್ಲಿ ಬೇಕಾದರೂ ಮಾರಾಟ ಮಾಡಬಹುದು ಅಥವಾ ಎಲ್ಲಿ ಬೇಕಾದ್ರು ಖಾಸಗಿಯಾಗಿ ಬೇಕಾದ್ರು ಮಾರಾಟ ಮಾಡಬಹುದು. ಅದಕ್ಕಾಗಿಯೇ ನಾವು ಕಾಯ್ದೆ ತಂದಿದ್ದೇವೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments