ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣೆ ಇಂದು ನಡೆದಿದ್ದು, ಅಧ್ಯಕ್ಷರಾಗಿ ಅಪ್ಪಾಜಿಗೌಡ ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
ರಾಜ್ಯ ಒಕ್ಕಲಿಗರ ಸಂಘದ ಉಪಕಾರ್ಯದರ್ಶಿಯಾಗಿ ಶಶಿಕಿರಣ ಮತ್ತು ಪ್ರಸನ್ನ, ಕಾರ್ಯದರ್ಶಿಯಾಗಿ ಮಂಜುನಾಥ. ಸಿ, ಜಂಟಿ ಕಾರ್ಯದರ್ಶಿಯಾಗಿ ನಾರಾಯಣ ಮೂರ್ತಿ, ಖಜಾಂಚಿಯಾಗಿ ಡಿ.ಸಿ.ಕಾಳೇಗೌಡ ಮತ್ತು ಗೌರವ ಕಾರ್ಯದರ್ಶಿಯಾಗಿ ಬಾಲಕೃಷ್ಣಗೌಡ ಅವರು ಆಯ್ಕೆಯಾಗಿದ್ದಾರೆ.
ರಾಜ್ಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದ್ದ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಅಪ್ಪಾಜಿಗೌಡ ಅವರು ಮರು ಆಯ್ಕೆಯಾಗಿದ್ದು, ಮೆಡಿಕಲ್ ಸಿಟ್ ಹಗರಣದಲ್ಲಿ ಅಪ್ಪಾಜಿಗೌಡ ವಿರುದ್ಧ ಚಾರ್ಜ್ ಸಿಟ್ ಸಲ್ಲಿಕೆಯಾಗಿದೆ. ಅವರು 20 ನಿರ್ದೇಶಕರಿಗೆ ಆಮಿಷ ಒಡ್ಡಿ ಚುನಾವಣೆಯಲ್ಲಿ ಮರು ಆಯ್ಕೆಯಾಗಿದ್ದಾರೆ ಎಂದು ಒಕ್ಕಲಿಗ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ