ಮದರಸಾ ತೆರವುಗೊಳಿಸುವಂತೆ ಮನವಿ

Webdunia
ಮಂಗಳವಾರ, 20 ಡಿಸೆಂಬರ್ 2022 (17:09 IST)
ಸಾಕಷ್ಟು ವಿವಾದ ಸೃಷ್ಟಿಸಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ. ಜಾಮಿಯಾ ಮಸೀದಿಯ ಒಳಭಾಗದಲ್ಲಿ ನಡೆಯುತ್ತಿರುವ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಮಂಡ್ಯ ಜಿಲ್ಲಾಡಳಿತಕ್ಕೆ ಗಡುವು ನೀಡಿದೆ. ಐತಿಹಾಸಿಕ ಸ್ಥಳವಾಗಿರುವ ಜಾಮಿಯಾ ಮಸೀದಿ ಅಲ್ಲ, ಅದು ಮಂದಿರ ಎಂದು ಅತ್ತ ಬಜರಂಗಸೇನೆ ಹೈಕೋರ್ಟ್ ಮೆಟ್ಟಿಲೇರುವ ಮೂಲಕ ಕಾನೂನು ಹೋರಾಟವನ್ನು ಆರಂಭಿಸಿದೆ. ಇತ್ತ ಹಿಂದೂ ಜಾಗರಣ ವೇದಿಕೆ ಮಸೀದಿಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದರಸಾ ತೆರವಿಗೆ ಹೋರಾಟವನ್ನು ಆರಂಭಿಸಿದೆ. 1934 ರಲ್ಲಿ ಜಾಮಿಯಾ ಮಸೀದಿ ಪ್ರಾಚ್ಯವಸ್ತು ಮತ್ತು ಭಾರತೀಯ ಪರಿವೀಕ್ಷಣಾ ಇಲಾಖೆಗೆ ಸೇರಿದ್ದು, ಈ ಕಟ್ಟಡದಲ್ಲಿ ಮದರಸಾದಂತಹ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಹೀಗಿದ್ದರೂ ಕೂಡ ಜಾಮಿಯಾ ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ನಡೆಸಲಾಗುತ್ತಿದ್ದು, ಕಳೆದ ಹಲವು ವರ್ಷಗಳಿಂದ ಹಿಂದೂಪರ ಸಂಘಟನೆಗಳು ಅಕ್ರಮ ಮದರಸಾ ತೆರವು ಮಾಡಬೇಕೆಂದು ಆಗ್ರಹ ಮಾಡುತ್ತಿವೆ. ಇಷ್ಟಾದರೂ ಕೂಡ ಕ್ರಮ ಕೈಗೊಳ್ಳದ ಹಿನ್ನೆಲೆ ಹಿಂದೂ ಜಾಗರಣಾ ವೇದಿಕೆ ಪ್ರಾಚ್ಯವಸ್ತು ಮತ್ತು ಭಾರತೀಯ ಪರಿವೀಕ್ಷಣಾ ಇಲಾಖೆಗೆ ಗಡುವು ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments