ಶೀಘ್ರದಲ್ಲೇ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಆರಂಭ

Webdunia
ಸೋಮವಾರ, 7 ಆಗಸ್ಟ್ 2023 (22:00 IST)
ರಾಜ್ಯದಲ್ಲಿ ಕಳೆದ ಎರಡು ತಿಂಗಳ ಹಿಂದೆ ವಿಧಾನಸಭೆ ಚುನಾವಣೆ ಘೊಷಣೆಯಾಗಿದ್ದರಿಂದ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದಗಿನಿಂದ ಸರಕಾರಿ ಸೇವೆ ನೀಲ್ಲಿಸಲಾಗಿತ್ತು. ಅದರಂತೆ ಹಿಗಾಗಿ ಜನರಿಗೆ ಹೊಸ  ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಕೆಗೆ ತುಂಬಾ ತೊಂದರೆ ಯಾಗ್ತಾಯಿತ್ತು.ಇದೆಲ್ಲ ಗಮನದಲ್ಲಿಟ್ಟು ಕೊಂಡು ಇದೀಗ ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಆರಂಭಮಾಡೊದಾಗಿ ಸರ್ಕಾರ ತೀಳಿಸಿದೆ. ಕಾಂಗ್ರೆಸ್ ಜಾರಿ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಪಡಿತರ ಚೀಟಿ ತುಂಬಾ  ಮುಖ್ಯವಾಗಿದ್ದು, ಜನರು ರೇಷನ್ ಕಾರ್ಡ್ಗಾಗಿ ಅಲೆಯುತ್ತಿದ್ದಾರೆ. ಹಿಗಾಗಿ ಸರ್ಕಾರದ ಯೋಜನೆಗಳಿಂದ ಯಾವ ಫಲಾನುಭವಿಗಳು ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ ಆಹಾರ ಇಲಾಖೆ ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಆರಂಭಮಾಡೊಕೆ ಮುಂದಾಗಿದೆ.

ಇನ್ನೂ  ಆಹಾರ ಇಲಾಖೆಯ ಫೋರ್ಟಲ್ ಸದ್ಯ ಮೊಬೈಲ್‌ ಮಾತ್ರ ಒಪನ್ ಆಗಿದೆ. ಆದ್ರೆ ಇದರಲ್ಲಿ ಅರ್ಜಿ ಸಲ್ಲಿಕೆ ಮಾಡಲು ಆಗುವುದಿಲ್ಲ. ಇದರಿಂದ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲು ಹೊಸವೆಬ್ ಸೈಟ್ ಡೆವಲಪ್ ಮಾಡಬೇಕು. ತದನಂತರದಲ್ಲಿ ಅರ್ಜಿಸಲ್ಲಿಕೆಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಈಗಾಗಲೇ ಬಿಪಿಎಲ್ ಕಾರ್ಡ್‌ ಪಡೆಯಲು 3 ಲಕ್ಷ ಮಂದಿ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಕಾರ್ಡ್ ಗಳ ವಿಲೇವಾರಿಯೇ ಇನ್ನು ಬಾಕಿ ಇದೆ. ಈ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕಾರ್ಡ್‌ ನೀಡಲು ಸರ್ಕಾರ‌ ಮುಂದಾಗಿದೆ. ಇನ್ನೂ 2016ರಲ್ಲಿ BPL ಪಡಿತರ ಚೀಟಿಗೆ ಅರ್ಜಿಸಲ್ಲಿಸೊಕೆ ಯಾರೂ ಅರ್ಹರು ಮತ್ತು ಅರ್ಜಿಸಲ್ಲಿಕೆಗೆ ಆಹಾರ ಇಲಾಖೆ ನಿಗದಿ ಮಾಡಿದ್ದ ಮಾನದಂಡಳು ಏನ್ನೂ ಅಂತಾ ನೊಡೊದಾದ್ರೆ,

1) ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಾಯಂ ನೌಕರರಾಗಿರಬಾರದು
2) ವೃತ್ತಿ ತೆರಿಗೆ, ಜಿಎಸ್‌ಟಿ, ಆದಾಯ ತೆರಿಗೆ ಪಾವತಿದಾರರಾಗಿರಬಾರದು
3) ಗ್ರಾಮೀಣ ಭಾಗದಲ್ಲಿ 3 ಹೆಕ್ಟೇರ್‌ ಗಿಂತ ಹೆಚ್ಚು ಭೂಮಿ ಹೊಂದಿರಬಾರದು
4) ನಗರದಲ್ಲಿ 1,000 ಚದರಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಇರಬಾರದು
5) ಟ್ರಾಕ್ಟರ್‌, ಕ್ಯಾಬ್‌, ಟ್ಯಾಕ್ಸಿ ಹೊರತಾಗಿ ವೈಟ್ ಬೋರ್ಡ್ ಕಾರು ಹೊಂದಿರಬಾರದು
6) ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಹೆಚ್ಚು ಇರುವ ಕುಟುಂಬವಾಗಿರಬಾರದು

ನೊಡಿದ್ರಲ್ಲ ವಿಕ್ಷಕರೆ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸುವವರು ಮೇಲೆ ತಿಳಿಸಲಾದ ಸರ್ಕಾರದ ಮಾನದಂಡಗಳನ್ನ ಮೀರಿ ಅರ್ಜಿಸಲ್ಲಿಕೆ ಮಾಡಿದ್ರೆ ಕಾರ್ಡ್ ಗಳು ರದ್ದಾಗಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments