Select Your Language

Notifications

webdunia
webdunia
webdunia
webdunia

ಎಚ್‍ಎಎಲ್‍ನಲ್ಲಿ ಉದ್ಯೋಗವಕಾಶಕ್ಕೆ ಮನವಿ : ಪರಮೇಶ್ವರ್

ಎಚ್‍ಎಎಲ್‍ನಲ್ಲಿ ಉದ್ಯೋಗವಕಾಶಕ್ಕೆ ಮನವಿ : ಪರಮೇಶ್ವರ್
ತುಮಕೂರು , ಬುಧವಾರ, 16 ಆಗಸ್ಟ್ 2023 (08:03 IST)
ತುಮಕೂರು : ಜಿಲ್ಲೆಯ ಗುಬ್ಬಿ ಸಮೀಪ ನಿರ್ಮಾಣವಾಗಿರುವ ಎಚ್ಎಎಲ್ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಂಸ್ಥೆ ಮುಖ್ಯಸ್ಥರನ್ನು ಕೇಳಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಹತೆ ಆಧಾರದ ಮೇಲೆ ಸ್ಥಳೀಯರಿಗೆ ಉದ್ಯೋಗ ಕೊಡಬೇಕು. ಜಮೀನು ಕೊಟ್ಟವರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕೊನೆಗೆ ಕಸ ಗುಡಿಸುವ ಕೆಲಸವನ್ನಾದರೂ ಕೊಡುವಂತೆ ಹೇಳಿದ್ದೇವೆ ಎಂದರು.

ಜಿಲ್ಲೆಯಲ್ಲಿ ಹೊಸದಾಗಿ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ರಾಜ್ಯ ಸರ್ಕಾರದ ಹಂತದಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸದ್ಯಕ್ಕೆ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾಪ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಕಾರ್ಗೊ ವಿಮಾನ ನಿಲ್ದಾಣ ನಿರ್ಮಾಣವಾಗಬಹುದು ಎಂದು ಸುಳಿವು ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಟೊಮೆಟೋ ಆಯ್ತು, ಈಗ ಮಾರುಕಟ್ಟೆಯಲ್ಲಿ ಈರುಳ್ಳಿಯದೇ ಕಾರುಬಾರು!