Publish Date: Tue, 17 Sep 2019 (11:26 IST)
Updated Date: Tue, 17 Sep 2019 (11:29 IST)
ನವದೆಹಲಿ : ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆ. 23, ಸೋಮವಾರಕ್ಕೆ ಮುಂದೂಡಿಕೆಗೆ ಮಾಡುವುದರ ಮೂಲಕ ಅನರ್ಹರಿಗೆ ಬಿಗ್ ಶಾಕ್ ನೀಡಿದೆ.
ಮಾಜಿ ಸ್ಪೀಕರ ರಮೇಶ್ ಕುಮಾರ್ ಅವರ ಆದೇಶವನ್ನು ಪ್ರಶ್ನಿಸಿ 17 ಜನ ಅನರ್ಹರು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಇಂದು ನಡೆಯಿತು. ಆದರೆ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾ. ಶಾಂತನಗೌಡರು ಹಿಂದೆ ಸರಿದಿದ್ದಾರೆ.
ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಪೀಠದ ಮರುರಚನೆಯಾಗಬೇಕು. ಬೇರೆ ನ್ಯಾಯಮೂರ್ತಿಗಳು ಪೀಠಕ್ಕೆ ನೇಮಕವಾಗಬೇಕು. ಆದಕಾರಣ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ಇದರಿಂದ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆಯಾಗಿದೆ.