Select Your Language

Notifications

webdunia
webdunia
webdunia
webdunia

ಸರಕಾರದ ಇಲಾಖೆಯಿಂದ ಅರ್ಜಿ ಆಹ್ವಾನ

ಸರಕಾರದ ಇಲಾಖೆಯಿಂದ ಅರ್ಜಿ ಆಹ್ವಾನ
ಗದಗ , ಬುಧವಾರ, 19 ಆಗಸ್ಟ್ 2020 (16:43 IST)
ರಾಜ್ಯ ಸರಕಾರದ ಇಲಾಖೆಯಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ. 25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ  ರೂ. 1,00,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯೆಂದು ಪ್ರದಾನ ಮಾಡಿ ಗೌರವಿಸುತ್ತದೆ.

2020 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು  ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ ಪ್ರತಿಯಲ್ಲಿ  ಸೆಪ್ಟೆಂಬರ 15 ರೊಳಗೆ ಸಲ್ಲಿಸಬೇಕು.

ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು ಎಂದು ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಹಬ್ಬಕ್ಕೂ ಮುನ್ನ ನೂತನ MLC ಗಳಿಗೆ ಎದುರಾಯಿತು ವಿಘ್ನ