Publish Date: Sat, 08 Jul 2023 (17:01 IST)
Updated Date: Sat, 08 Jul 2023 (17:04 IST)
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳ ಹೆಚ್ಚಳ ಹಿನ್ನಲೆ. ಎಕ್ಸ್ಪ್ರೆಸ್ ಹೈವೇ ಅಪಘಾತಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಡಿಸಿ-ಎಸ್ಪಿ ನೇತೃತ್ವದಲ್ಲಿ ಹೆದ್ದಾರಿ ಪರಿಶೀಲನೆ ಮಾಡಲಾಗುತ್ತಿದೆ. ಸ್ಪೀಡರ್ಗನ್ ಕಾರ್ಯಾಚರಣೆ ಮೂಲಕ ಅಪಘಾತ ತಡೆಯಲು ಪೊಲೀಸರು ಮುಂದಾಗಿದ್ದಾರೆ. ಮಂಡ್ಯದ ಕೋಡಿಶೆಟ್ಟಿಪುರ ಗ್ರಾಮದ ಬಳಿ ಸ್ಪೀಡರ್ಗನ್ ಅಳವಡಿಕೆ ಮಾಡಲಾಗಿದ್ದು, ವಾಹನ ಚಾಲನೆ ಮಾಡುವವರು ಸ್ಪೀಡ್ ಲಿಮಿಟ್ ಅನುಸರಿಸುವಂತೆ ಮನವಿ ಮಾಡಿದ್ದಾರೆ. ಇನ್ನು ವೇಗಮಿತಿ ಉಲ್ಲಂಘಿಸಿದವರ ವಿರುದ್ದ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.. ದಂಡ ವಿಧಿಸಿ ಪ್ರಕರಣ ದಾಖಲು ಮಾಡುವ ಬಗ್ಗೆ ಎಸ್ಪಿ ಎನ್.ಯತೀಶ್ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ