Webdunia - Bharat's app for daily news and videos

Install App

ಕೆಪಿಎಸ್‌ಸಿಗೆ ಶ್ಯಾಂಭಟ್ ನೇಮಕ ಸೂಕ್ತವಲ್ಲ: ಪೂಜಾರಿ

Webdunia
ಸೋಮವಾರ, 8 ಆಗಸ್ಟ್ 2016 (16:16 IST)
ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರಾಗಿ ಶ್ಯಾಂಭಟ್ ಅವರನ್ನು ನೇಮಕ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಜನಾರ್ಧನ ಪೂಚಾರಿ ಅಭಿಪ್ರಾಯಪಟ್ಟಿದ್ದಾರೆ. 
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪ ಹೊತ್ತಿರುವ ಶ್ಯಾಂಭಟ್ ಅವರನ್ನು ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರಾಗಿ ನೇಮಕ ಮಾಡುವುದು ಸರಿಯಲ್ಲ. ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೆ ತಪ್ಪು ಮಾಡುತ್ತಿದ್ದಾರೆ ಎಂದು ಹೇಳಿದರು.
 
ಒಂದು ವೇಳೆ ಕೆಪಿಎಸ್‌ಸಿ ಅಧ್ಯಕ್ಷರಾಗಿ ಶ್ಯಾಂಭಟ್ ಅವರನ್ನು ನೇಮಕ ಮಾಡಿದ್ದರೆ, ತಕ್ಷಣವೇ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಕಾಂಗ್ರೆಸ್ ಮುಖಂಡ ಜನಾರ್ಧನ ಪೂಚಾರಿ ಆಗ್ರಹಿಸಿದ್ದಾರೆ. 
 
ಬಿಡಿಎ ಆಯುಕ್ತ ಶ್ಯಾಂ ಭಟ್ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಭ್ರಷ್ಟಾಚಾರ ಸೇರಿದಂತೆ ಕರ್ತವ್ಯ ಲೋಪ ಆರೋಪವನ್ನು ಎದುರಿಸುತ್ತಿದ್ದಾರೆ. ಈ ವ್ಯಕ್ತಿ  ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಹರಲ್ಲ. ಇಂತಹ ಆರೋಪ ಹೊತ್ತಿರುವವರನ್ನು ಅಧ್ಯಕ್ಷರಾಗಿ ನೇಮಕ ಮಾಡುವುದರಿಂದ ಸರಕಾರ ತೀವ್ರ ಮುಜುಗರಕ್ಕೊಳಗಾಗುತ್ತದೆ ಎಂದು ಪ್ರಜ್ಞಾವಂತ ನಾಗರಿಕ ಕಳಕಳಿ ಸಂಸ್ಥೆಯ (ಎಸಿಐಸಿಎಂ) ಸಂಚಾಲಕ ಲಕ್ಷಣ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರತ್ರ ಬರೆದಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments