Webdunia - Bharat's app for daily news and videos

Install App

ಮಂಡ್ಯದಲ್ಲಿ ಅಪ್ಪು ಅಭಿಮಾನಿ ಆತ್ಮಹತ್ಯೆ

Webdunia
ಭಾನುವಾರ, 30 ಅಕ್ಟೋಬರ್ 2022 (16:56 IST)
ಅಭಿಮಾನಿಗಳ ಆರಾಧ್ಯ ದೈವವಾಗಿರುವ ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಮ್ಮನ್ನೆಲ್ಲ  ಅಗಲಿ ಒಂದು ವರ್ಷ ಕಳೆದಿದೆ. ಈ ನಡುವೆ ಅಪ್ಪು ಸ್ಮರಣೆಯಲ್ಲಿ ಭಾಗವಹಿಸಿದ್ದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಕೇವಲ ಬೆಂಗಳೂರಷ್ಟೇ ಅಲ್ಲದೇ ರಾಜ್ಯದ ಎಲ್ಲ ಭಾಗಗಳಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಪುನೀತ್‍ರನ್ನು ಅಭಿಮಾನಿಗಳು ನಿನ್ನೆ ಸ್ಮರಿಸಿದ್ದಾರೆ. ಈ ನಡುವೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ಅಪ್ಪು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಹೊಸ ಆನಂದೂರು ಗ್ರಾಮದ ಕಿರಣ್ ಮೃತ ಯುವಕ. ಶನಿವಾರ ಗ್ರಾಮದಲ್ಲಿ ನಡೆದ ಅಪ್ಪು ಸ್ಮರಣೆಯಲ್ಲಿ ಭಾಗವಹಿಸಿ, ಅನ್ನಸಂತರ್ಪಣೆ ಕೂಡ ನಡೆಸಿದ್ದ. ಆದರೆ ಕಾರ್ಯಕ್ರಮದ ಬಳಿಕ ಮನೆಗೆ ರಾತ್ರಿ 10 ಗಂಟೆಯಲ್ಲಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments