Webdunia - Bharat's app for daily news and videos

Install App

ಸಿಇಟಿ: ಶುಲ್ಕ ಪಾವತಿ, CET ಪರೀಕ್ಷೆ ಆಯ್ಕೆಗೆ ಏ.12 ಗಡುವು

Krishnaveni K
ಬುಧವಾರ, 10 ಏಪ್ರಿಲ್ 2024 (16:22 IST)
ಬೆಂಗಳೂರು: ಏ.18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ ಪಾವತಿಸಲು ಮತ್ತು ಸಿಇಟಿ ಪರೀಕ್ಷೆಯ ಆಯ್ಕೆ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ ಅನುಮತಿ ಕೊಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಬುಧವಾರ ತಿಳಿಸಿದ್ದಾರೆ.
 
ಇದರಂತೆ, ಇದುವರೆಗೂ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳು ಏ.10ರ ಬೆಳಿಗ್ಗೆಯಿಂದ ಏ.12ರ ಸಂಜೆ 5 ಗಂಟೆಯವರೆಗೆ ಶುಲ್ಕ ಪಾವತಿಸಬಹುದಾಗಿದೆ.
 
ಇಂತಹ ಅಭ್ಯರ್ಥಿಗಳು 'ಕಾರ್ಯ ನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು' ಇವರ ಹೆಸರಿಗೆ 600 ರೂ. ಮೊತ್ತದ  ಡಿ.ಡಿ. ತೆಗೆಸಿಕೊಂಡು, ಸಿಇಟಿ ಅರ್ಜಿ ನಮೂನೆ ಸಹಿತ ಪ್ರಾಧಿಕಾರದ ಕಚೇರಿಗೆ ಖುದ್ದಾಗಿ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.
 
ಇನ್ನು, ಅರ್ಜಿಯಲ್ಲಿ ಕೆಲವರು ಕೇವಲ ನೀಟ್ ಆಯ್ಕೆ ಮಾಡಿಕೊಂಡಿದ್ದು ಅಂತಹವರು ಈಗ ಸಿಇಟಿ ಪರೀಕ್ಷೆಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅಂತಹ ಅಭ್ಯರ್ಥಿಗಳು ಕೂಡ ಏ.12ರ ಸಂಜೆ 5 ಗಂಟೆಯೊಳಗೆ ಪ್ರಾಧಿಕಾರಕ್ಕೆ ಹಾಜರಾಗಿ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.
 
ಆದರೆ, ಹೀಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರಾಜ್ಯದ ಯಾವುದೇ ಭಾಗದಲ್ಲಿ ಖಾಲಿ‌ ಇರುವ ಪರೀಕ್ಷಾ ಕೇಂದ್ರಗಳಲ್ಲಿ ಅವಕಾಶ ಕೊಡಲಾಗುವುದು. ಅಭ್ಯರ್ಥಿಗಳು ಇದಕ್ಕೆ ಸಿದ್ಧರಿರಬೇಕು ಮತ್ತು ಈ ಹಂತದಲ್ಲಿ ಅರ್ಜಿಯನ್ನು ಪರಿಗಣಿಸುವದರಿಂದ ದತ್ತಾಂಶಗಳಲ್ಲಿ ಆಗಲಿರುವ ವ್ಯತ್ಯಾಸವನ್ನು ಆಕ್ಷೇಪಿಸಲು ಅವಕಾಶ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಮುಂದಿನ ಸುದ್ದಿ
Show comments