Select Your Language

Notifications

webdunia
webdunia
webdunia
webdunia

ಏಪ್ರಿಲ್ 12 ರಂದು ಕೆಮೆಸ್ಟ್ರಿ ಮರು ಪರೀಕ್ಷೆ : ಕಿಮ್ಮನೆ ರತ್ನಾಕರ್

ಏಪ್ರಿಲ್ 12 ರಂದು ಕೆಮೆಸ್ಟ್ರಿ ಮರು ಪರೀಕ್ಷೆ : ಕಿಮ್ಮನೆ ರತ್ನಾಕರ್
ಬೆಂಗಳೂರು , ಗುರುವಾರ, 31 ಮಾರ್ಚ್ 2016 (14:13 IST)
ದ್ವಿತಿಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಏಪ್ರಿಲ್ 12 ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಖಾತೆ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.
 
ದ್ವಿತಿಯ ಕೆಮೆಸ್ಟ್ರಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಪ್ರಕರಣ ಸಂಬಂಧ ಸಿಐಡಿ ತನಿಖೆ ಜಾರಿಯಲ್ಲಿದೆ. ಸಿಐಡಿ ಅಧಿಕಾರಿಗಳೊಂದಿಗೆ ನಿರಂತರ ನಾವು ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ. 
 
ಪ್ರಶ್ನೆಪತ್ರಿಕೆ ಸೋರಿಕೆ ಘಟನೆಯಲ್ಲಿ 40 ಮಂದಿ ಅಧಿಕಾರಿಗಳು ಸಿಬ್ಬಂದಿಗಳನ್ನು ಅಮಾನತ್ತು ಮಾಡಲಾಗಿದೆ. ಒಂದು ವೇಳೆ ಇತರರು ಭಾಗಿಯಾಗಿರುವುದು ಕಂಡುಬಂದಲ್ಲಿ ಅವರ ವಿರುದ್ಧವು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.
 

Share this Story:

Follow Webdunia kannada