Webdunia - Bharat's app for daily news and videos

Install App

ಸದನದಲ್ಲಿ ಹಾಸಿಗೆ ಕೇಳಿದ ಆರಗ ಜ್ಞಾನೇಂದ್ರ

geetha
ಸೋಮವಾರ, 19 ಫೆಬ್ರವರಿ 2024 (21:16 IST)
ಬೆಂಗಳೂರು : ಹಾಸಿಗೆ ದಿಂಬು ನೀಡಿ ಎಂದು ಸದನದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿಕೊಂಡ ಸನ್ನಿವೇಶ ಸೋಮವಾರ ಅಧಿವೇಶನದ ವೇಳೆ ನಡೆಯಿತು.ಸದನದಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿದೆ. ಮಧ್ಯಾಹ್ನ ಊಟಕ್ಕೆಂದು ಹೊರಹೋದವರು ವಾಪಸ್‌ ಬರುವುದೇ ಇಲ್ಲ ಎಂದು ಆಕ್ಷೇಪಿಸಿದ ಸಭಾಪತಿ ಯು.ಟಿ ಖಾದರ್‌ ಸದಸ್ಯರ ವರ್ತನೆಯನ್ನು ಸುಧಾರಿಸಿಕೊಳ್ಳಬೇಕು ಎಂದರು. ಊಟಕ್ಕೆ ಯಾರೂ ಹೊರಗೆ ಹೋಗುವುದು ಬೇಡ. ಇಡೀ ಬೆಂಗಳೂರಿನಲ್ಲಿಯೇ ಎಲ್ಲೂ ಸಿಗದ ಅತ್ಯುತ್ತಮ ಸಸ್ಯಾಹಾರಿ ಊಟದ ವ್ಯವಸ್ಥೆಯನ್ನು ವಿಧಾನಸೌಧದಲ್ಲೇ ಮಾಡಲಾಗಿದೆ. ಹೀಗಾಗಿ ಊಟಕ್ಕೆ ಹೊರ ಹೋಗುವ ಅವಶ್ಯಕತೆಯಿಲ್ಲ ಎಂದರು. 

ಈ ವೇಳೆ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ, ಊಟವಾದ ಬಳಿಕ ಒಳ್ಳೆಯ ಹಾಸಿಗೆ ಮತ್ತಿತರ ವ್ಯವಸ್ಥೆಯನ್ನೂ ಸಹ ಮಾಡಿಬಿಡಿ. ನಾವೆಲ್ಲರೂ ನಿಮಗೆ ಆಶೀರ್ವದಿಸುತ್ತೇವೆ ಎಂದು ಚಟಾಕಿ ಹಾರಿಸಿದರು. ಈ ಸಲಹೆಯನ್ನು ಉಪೇಕ್ಷಿಸಿದ ಯು.ಟಿ.ಖಾದರ್‌, ನಸುನಕ್ಕು ಪ್ರಶ್ನೋತ್ತರವನ್ನು ಕೈಗೆತ್ತಿಕೊಂಡರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments