Webdunia - Bharat's app for daily news and videos

Install App

ಕಾಂಗ್ರೆಸ್‌ ಶಾಸಕರು ಅಷ್ಟು ದುರ್ಬಲರಾ: ಸಿದ್ದರಾಮಯ್ಯ ಆರೋಪಕ್ಕೆ ಸಿ.ಟಿ.ರವಿ ತಿರುಗೇಟು

Sampriya
ಗುರುವಾರ, 14 ನವೆಂಬರ್ 2024 (14:53 IST)
ಚಿಕ್ಕಮಗಳೂರು: ಕಾಂಗ್ರೆಸ್‌ ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೇನಾ? ಕುದುರೇನಾ? ದನನಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ನಿಮ್ಮ ಪಕ್ಷದ ಶಾಸಕರು ಅಷ್ಟು ದುರ್ಬಲರಾ? ಬದ್ಧತೆ ಇರುವ ಯಾವುದೇ ಶಾಸಕರನ್ನ ಖರೀದಿ ಮಾಡಲು ಸಾಧ್ಯವಿಲ್ಲ. ನಿಮ್ಮ ಆರೋಪ ಆಧಾರ ರಹಿತ ಎಂದು ಹೇಳಿದ್ದಾರೆ.

ಯಾರು, ಯಾವಾಗ, ಯಾರನ್ನ ಖರೀದಿ ಮಾಡಲು ಪ್ರಯತ್ನ ಪಟ್ಟಿದ್ದಾರೆ? ಆಧಾರ ಇದ್ದರೆ ದೂರು ನೀಡಿ. ಸಾಕ್ಷಿ ಇದ್ದರೆ ಆಧಾರ ಸಹಿತವಾಗಿ ನ್ಯಾಯಾಲಯದಲ್ಲಿ ನಿರೂಪಿಸಿ. ಸಿಎಂ ಸ್ಥಾನದಲ್ಲಿ ಇದ್ದು, ಆ ಸ್ಥಾನದ ಜವಾಬ್ದಾರಿ ಮರೆತು ಕೇವಲ ಆರೋಪ ಮಾಡೋದು ರಾಜಕೀಯ ಪ್ರೇರಿತ. ಬಿಜೆಪಿ ವಿರುದ್ಧ ತಪ್ಪು ಅಭಿಪ್ರಾಯ ಮೂಡಿಸಲು ಮಾಡುತ್ತಿರುವ ಆರೋಪ ಎಂದು ಕಿಡಿಕಾರಿದ್ದಾರೆ.

ದಿನನಿತ್ಯ ಸುಳ್ಳು ಹೇಳುವುದು ಸಿದ್ದರಾಮಯ್ಯರ ರಾಜಕೀಯದ ಭಾಗವಾಗಿದೆ. ಸುಳ್ಳು ಹೇಳದೆ ಇದ್ದರೆ ಊಟವೂ ಜೀರ್ಣ ಆಗಲ್ಲ. ರಾತ್ರಿ ನಿದ್ದೆಯೂ ಬರಲ್ಲ. ಸುಳ್ಳಿಂದಲೇ ರಾಜಕೀಯ ಆರಂಭ ಆಗಿ, ಸುಳ್ಳಿಂದಲೇ ನಿಮ್ಮ ದಿನಚರಿ ಅಂತ್ಯ ಆಗುವ ರೀತಿ ಇದೆ. ಸಾಕ್ಷಿ ಇದ್ದರೆ ನಿರೂಪಿಸಿ, ಇಲ್ಲ ಎಂದರೆ ಸಾರ್ವಜನಿಕವಾಗಿ ಕ್ಷೇಮೆ ಕೇಳಿ ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments