Webdunia - Bharat's app for daily news and videos

Install App

ಫ್ಲೆಕ್ಸ್ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ

Webdunia
ಮಂಗಳವಾರ, 8 ಆಗಸ್ಟ್ 2023 (07:06 IST)
ಬೆಂಗಳೂರು : ರಾಜಧಾನಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ತಡೆಗೆ ವಿಫಲವಾಗಿದೆ ಎಂದು ಕ್ರಮ ಕೈಗೊಳ್ಳದ ಬಿಬಿಎಂಪಿ , ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.

ಪ್ರಸನ್ನ ಬಿ. ವರಾಳೆ, ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠವು, ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೇ? ಫ್ಲೆಕ್ಸ್ ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ? ಚುನಾವಣೆ ವೇಳೆ 60,000 ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಆದರೆ ಕೇವಲ 134 ದೂರು ಪರಿಗಣಿಸಿ 40 ಎಫ್ಐಆರ್ ದಾಖಲಿಸಲಾಗಿದೆ. ಉಳಿದ ಪ್ರಕರಣಗಳು ಏನಾಯ್ತು ಎಂದು ಗರಂ ಆಗಿದೆ.

ಫ್ಲೆಕ್ಸ್ ಅಳವಡಿಸಿದ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳುತ್ತಿಲ್ಲ. ಬೆಂಗಳೂರು ಸುಂದರವಾಗಿರುವುದು ಸರ್ಕಾರಕ್ಕೆ ಬೇಕಿಲ್ಲವೇ? ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಇರಬೇಕೆಂದು ಸರ್ಕಾರದ ಅಪೇಕ್ಷೆಯೇ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

ಬ್ರ್ಯಾಂಡ್ ಬೆಂಗಳೂರಿಗೆ ಫ್ಲೆಕ್ಸ್, ಬ್ಯಾನರ್ಗಳಿಂದ ಕಳಂಕ. ಬೆಂಗಳೂರಿನ ಬಗ್ಗೆ ಹೂಡಿಕೆದಾರರಿಗೆ ಎಂತಹ ಚಿತ್ರಣ ನೀಡುತ್ತಿದ್ದೀರಿ? ಬೆಂಗಳೂರಿನ ಸ್ಥಿತಿ ಸುಧಾರಿಸದಿದ್ದರೆ ಹೂಡಿಕೆ ಹೇಗೆ ತರುತ್ತೀರಿ? ಬೆಂಗಳೂರನ್ನು ಅದರ ಅದೃಷ್ಟಕ್ಕೇ ಬಿಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments