Webdunia - Bharat's app for daily news and videos

Install App

ನಿಮ್ಮ ಕುಟುಂಬದವರು, ನೆರೆಹೊರೆಯವರು ಬೇರೆ ರಾಜ್ಯದಲ್ಲಿದ್ದಾರಾ?

Webdunia
ಶನಿವಾರ, 9 ಮೇ 2020 (16:42 IST)
ನಿಮ್ಮ ಕುಟುಂಬದವರು ಹಾಗೂ ನೆರೆ ಹೊರೆಯವರು ಬೇರೆ ರಾಜ್ಯಗಳಲ್ಲಿ ಇದ್ದರೆ ಈ ಸುದ್ದಿಯನ್ನು ಮಿಸ್ ಮಾಡದೇ ಓದಿ.

ಲಾಕ್ ಡೌನ್ ನಂತರ ಅಂತರ್ ರಾಜ್ಯಗಳಿಂದ ಬಳ್ಳಾರಿ ಜಿಲ್ಲೆಗೆ ಬರುವ ವಲಸೆ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಹಾಗೂ ಇತರೇ ಸಾರ್ವಜನಿಕರಿಗೆ ಜಿಲ್ಲೆಯ ಮೂಲಕ ಪ್ರವೇಶಿಸುವುದಕ್ಕೆ ಬಳ್ಳಾರಿ ತಾಲೂಕಿನ ಜೋಳದರಾಶಿ ಬಳಿ ವಿಶೇಷ ಚೆಕ್‍ಪೋಸ್ಟ್‍ನ್ನು ಜಿಲ್ಲಾಡಳಿತ ಆರಂಭಿಸಿದೆ.

ಇಲ್ಲಿನ ವಲಸಿಗರಿಗೆ ತಪಾಸಣೆ ನಡೆಸಿ ಅವರ ಸಂಬಂಧಿಸಿದ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗುತ್ತಿದೆ ಮತ್ತು ಬಳ್ಳಾರಿ ಜಿಲ್ಲೆಯವರಾಗಿದ್ದರೇ ಅವರನ್ನು 14 ದಿನ ಕ್ವಾರಂಟೈನ್‍ಗೆ ಕಳುಹಿಸಿಕೊಡಲಾಗುತ್ತಿದೆ.

ಅನ್ಯ ಜಿಲ್ಲೆಗಳಿಗೆ ತೆರಳಬೇಕಾದವರಿದ್ದಲ್ಲಿ ಸಂಬಂಧಿಸಿದ ಜಿಲ್ಲಾ ನೋಡಲ್ ಅಧಿಕಾರಿಗಳ ಎಸ್ಕಾರ್ಟ್ ವಾಹನದ ಮೂಲಕ ವಲಸಿಗರ ವಾಹನವನ್ನು ಕರೆದುಕೊಂಡು ಸಂಬಂಧಿಸಿದ ಜಿಲ್ಲೆಯ ಗಡಿಯ ಚೆಕ್‍ಪೋಸ್ಟ್ ಬಳಿ ಬಿಟ್ಟು ಬರಲಾಗುತ್ತಿದೆ.

ಕಳೆದ 24 ಗಂಟೆಗಳಿಂದ ಗುಂಟೂರು, ಚಿತ್ತೂರು, ಅನಂತಪುರ ಜಿಲ್ಲೆಗಳಿಂದ 150 ಕ್ಕೂ ಹೆಚ್ಚು  ಜನರು ಈ ಚೆಕ್‍ಪೋಸ್ಟ್ ಮೂಲಕ ಆಗಮಿಸಿದ್ದು, ಅವರನ್ನು ತಪಾಸಣೆ ಮಾಡಿ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ.

ದಿನ 24 ತಾಸು 50 ಕ್ಕೂ ಹೆಚ್ಚು ಜನ ಸಿಬ್ಬಂದಿ ಮೂರು ಪಾಳಯದಲ್ಲಿ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಆಗಮಿಸುವ ವಲಸಿಗರನ್ನು ತಪಾಸಣೆ ಮಾಡುತ್ತಿದ್ದು,ಉಳಿದ ಇಲಾಖೆಗಳ ಸಿಬ್ಬಂದಿ ವಲಸಿಗರು ಯಾವ ಜಿಲ್ಲೆಯವರು; ಎಲ್ಲಿಗೆ ತಲುಪಬೇಕು ಎಂಬುದನ್ನು ನಮೂದಿಸಿಕೊಂಡು ಅಲ್ಲಿಗೆ ಕಳುಹಿಸಿಕೊಡುವ ಕೆಲಸ ಮಾಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಮುಂದಿನ ಸುದ್ದಿ
Show comments