Webdunia - Bharat's app for daily news and videos

Install App

ಅರೆಬೆಂದ ಶಕ್ತಿ ಯೋಜನೆಯಿಂದಾಗಿ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ: ಕುಮಾರಸ್ವಾಮಿ

Webdunia
ಮಂಗಳವಾರ, 12 ಸೆಪ್ಟಂಬರ್ 2023 (08:20 IST)
ಬೆಂಗಳೂರು : ಖಾಸಗಿ ಸಾರಿಗೆಯನ್ನೇ ನಂಬಿ ಜೀವನ ನಡೆಸುತ್ತಿರುವವರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಅಡ್ಡ ಪರಿಣಾಮದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ. ಬದುಕಿಗೆ ಗ್ಯಾರಂಟಿ ಕೊಡಿ ಎಂದು ಅವರು ಆಗ್ರಹಪಡಿಸಿದ್ದಾರೆ.

ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಸರ್ಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ಅವರು ಹೇಳಿದ್ದಾರೆ. 

ಈ ಬಂದ್ ನಿಂದ ಸರ್ಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ.

ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments