Webdunia - Bharat's app for daily news and videos

Install App

ಜಮೀನು ವಿಚಾರವಾಗಿ 2 ಕುಟುಂಬಗಳ ಗಲಾಟೆ

Webdunia
ಶುಕ್ರವಾರ, 16 ಜೂನ್ 2023 (19:53 IST)
ಜಮೀನು ವಿಚಾರವಾಗಿ ಮಹಿಳೆ ಹಾಗೂ ಕುಟುಂಬದವರ ಮೇಲೆ ಹಲ್ಲೆ ನಡೆಸಿರೋ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಐತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೌರಮಣಿ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಐತನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಸಣ್ಣ ತಮ್ಮಯ್ಯ ಹಾಗೂ ನಾಗರಾಜಯ್ಯ ಸಿದ್ದ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿದ ನಂತರ ಪುಟ್ಟಸ್ವಾಮಿ ಕುಟಂಬದಿಂದ ಪ್ರತಿ ದೂರು ದಾಖಲಾಗಿದೆ. ಪುಟ್ಟಸ್ವಾಮಿ ಕುಟುಂಬ ಸುಳ್ಳು ಪ್ರಕರಣ ದಾಖಲಿಸಿದೆ ಆರೋಪಿಸುತ್ತಿದೆ. ಜಮೀನು ವಿಚಾರವಾಗಿ ಎರಡು ಕುಟುಂಬದ ನಡುವೆ ವ್ಯಾಜ್ಯ ಶುರುವಾಗಿದ್ದು, ಪಿರಿಯಾಪಟ್ಟಣದ ನ್ಯಾಯಾಲಯದಲ್ಲಿ ಗೌರಮಣಿ ಕುಟುಂಬಕ್ಕೆ ಗೆಲುವಾಗಿದೆ. ಇದರಿಂದ ಅಸಮಾಧಾನಗೊಂಡು ಹಲ್ಲೆ ಆರೋಪ ಮಾಡಲಾಗಿದೆ. ಹಲ್ಲೆಗೊಳಗಾದ ಗೌರಮಣಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂಕ್ತ ಭದ್ರತೆ ನೀಡುವಂತೆ ಗೌರಮಣಿ ಕುಟುಂಬದವರ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments