Webdunia - Bharat's app for daily news and videos

Install App

ನ. 5 ರಿಂದ 16 ರವರೆಗೆ ಕೊಪ್ಪಳದಲ್ಲಿ ಸೇನಾ ಭರ್ತಿ ರ್ಯಾಲಿ

Webdunia
ಗುರುವಾರ, 19 ಸೆಪ್ಟಂಬರ್ 2019 (19:04 IST)
ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯಿಂದ 2019ರ ನವೆಂಬರ್ 5 ರಿಂದ 16ರವರೆಗೆ ಕೊಪ್ಪಳದ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಕ್ರೀಡಾಂಗಣದಲ್ಲಿ ಬೃಹತ್ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ.

ಈ ರ್ಯಾಲಿಯಲ್ಲಿ ಭಾಗವಹಿಸಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನೋಂದಣಿಗೆ ಆಹ್ವಾನಿಸಲಾಗಿದೆ.
ಸೋಲ್ಜರ್ ಜನರಲ್ ಡ್ಯೂಟಿ (ಆಲ್ ಅಮ್ರ್ಸ್), ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ನಿಕಲ್ (ಎವಿಯೇಶನ್/ ಅಮ್ಯುನೀಶನ್ ಎಕ್ಸಾಮಿನರ್) (Aviation/ Ammunition Examiner), ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟಂಟ್ (ಎಎಂಸಿ)/ ನಸಿಂಗ್ ಅಸಿಸ್ಟಂಟ್ ವೆರ್ಟನರಿ (ಎನ್‍ಎ ವಿಇಟಿ), ಸೋಲ್ಜರ್ ಕ್ಲರ್ಕ್/ ಸ್ಟೋರ್ ಕೀಪರ್/ ಟೆಕ್ನಿಕಲ್/ ಇನ್‍ವೆನ್‍ಟರಿ ಮ್ಯಾನೇಜ್‍ಮೆಂಟ್ (Inventory Management), ಸೋಲ್ಜರ್ ಟ್ರೇಡ್ಸ್‍ಮನ್ (ಆಲ್ ಅಮ್ರ್ಸ್) 10ನೇ ತರಗತಿ ಪಾಸ್, ಸೋಲ್ಜರ್ ಟ್ರೇಡ್ಸ್‍ಮನ್ (ಆಲ್ ಅಮ್ರ್ಸ್) 8ನೇ ತರಗತಿ ಪಾಸ್ ಹಾಗೂ ಸಿಫಾಯಿ ಫಾರ್ಮಾ ಹುದ್ದೆಗಳ ಭರ್ತಿಗಾಗಿ ರ್ಯಾಲಿ ನಡೆಯಲಿದೆ.

ಈಗಾಗಲೇ ಸೆಪೆಂಬರ್ 5 ರಿಂದ http://joinindianarmy.nic.in ವೆಬ್‍ಸೈಟ್‍ನಲ್ಲಿ ನೋಂದಣಿ ಪ್ರಾರಂಭಗೊಂಡಿದೆ. ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು 2019ರ ಅಕ್ಟೋಬರ್ 19 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅಕ್ಟೋಬರ್ 30 ಹಾಗೂ 31ರ ನಂತರ ತಮ್ಮ ನೊಂದಾಯಿತ ಇಮೇಲ್‍ನಿಂದ ಅಡ್ಮಿಟ್ ಕಾರ್ಡ್ ಪಡೆದು ರ್ಯಾಲಿ ನಡೆಯುವ ಸ್ಥಳದಲ್ಲಿ ಹಾಜರಿರಬೇಕು. ಬೆಳಗಾವಿಯ ಆರ್ಮಿ ರಿಕ್ರೂಟಿಂಗ್ ಕಚೇರಿಯಿಂದ ನಡೆಯಲಿರುವ ಈ ಸೇನಾ ಭರ್ತಿ ರ್ಯಾಲಿಯಲ್ಲಿ ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಆಸಕ್ತ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ. 

ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ವಿದ್ಯಾರ್ಹತೆ, ವಯೋಮಿತಿ, ದಾಖಲೆಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ http://joinindianarmy.nic.in ವೆಬ್‍ಸೈಟ್‍ನ್ನು ಅಥವಾ ಆರ್ಮಿ ರಿಕ್ರೂಟಿಂಗ್ ಆಫೀಸ್, ಬೆಳಗಾವಿ ಕಚೇರಿ ದೂರವಾಣಿ ಸಂಖ್ಯೆ 0831-2950001 ಗೆ ಸಂಪರ್ಕಿಸಲು ಕೋರಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments