Webdunia - Bharat's app for daily news and videos

Install App

12ರಿಂದ 14 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿ ಕೋವಿಡ್-19 ಲಸಿಕಾಕರಣಕ್ಕೆ ವ್ಯವಸ್ಥೆ

Webdunia
ಗುರುವಾರ, 17 ಮಾರ್ಚ್ 2022 (19:31 IST)
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮಕ್ಕಳಿಗೆ ಲಸಿಕಾಕರಣವು ಪ್ರಮುಖ ಪಾತ್ರ ವಹಿಸಲಿದ್ದು, 12ರಿಂದ 14 ವರ್ಷದ ಮಕ್ಕಳ ಲಸಿಕಾಕರಣ ಯಶಸ್ಸಿಗಾಗಿ ಶಾಲೆಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ತಿಳಿಸಿದರು.
 
ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕಾಕರಣ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ‘ಮುನ್ನೆಚ್ಚರಿಕೆ ಡೋಸ್’ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರೊಂದಿಗೆ ಸಚಿವ ನಾಗೇಶ್ ಅವರು ಚಾಲನೆ ನೀಡಿದರು.
 
‘15 ರಿಂದ 18 ವರ್ಷದೊಳಗಿನ ಮಕ್ಕಳ ಲಸಿಕಾಕರಣಕ್ಕೆ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಲಸಿಕಾಕರಣ ವೇಗ ಪಡೆಯಿತು. ಅದೇ ರೀತಿ ಈಗ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕಾಕರಣ ಆರಂಭವಾಗಿದ್ದು, ಶಾಲೆಗಳಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಕೆಲವೇ ದಿನಗಳಲ್ಲಿ ಶಾಲೆಗಳಲ್ಲಿ ಲಸಿಕಾಕರಣ ಆರಂಭವಾಗಲಿದೆ. 12ರಿಂದ 14 ವಯೋಮಾನದ ಎಲ್ಲ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಪಾಲಕರು ಸಹಕಾರ ನೀಡುವ ಮೂಲಕ ಸೋಂಕಿನ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಬೇಕು’ ಎಂದು ಸಚಿವರು ಹೇಳಿದರು.
 
‘ಕೋವಿಡ್ -19 ವಿರುದ್ಧ ಪ್ರಮುಖ ಅಸ್ತ್ರವಾಗಿರುವ ಲಸಿಕೆಯನ್ನು ಉಚಿತವಾಗಿ ನೀಡುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವದ ನಿರ್ಧಾರದಿಂದಾಗಿ ಈವರೆಗೆ ದೇಶದಲ್ಲಿ 182 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. 130 ಕೋಟಿಗೂ ಅಧಿಕ ಜನಸಂಖ್ಯೆಯ ಭಾರತದಲ್ಲಿ ಬೃಹತ್ ಪ್ರಮಾಣದಲ್ಲಿ ಉಚಿತ ಲಸಿಕೆ ಅಭಿಯಾನ ಯಶಸ್ಸು ಸಾಧಿಸಿದೆ. ಮಕ್ಕಳ ಲಸಿಕಾಕರಣ ಕೂಡ ಅದೇ ರೀತಿ ಯಶಸ್ಸು ಸಾಧಿಸುತ್ತದೆ. ಕೋವಿಡ್-19 ವಿರುದ್ಧ ಹೋರಾಟ ಮುಂದುವರೆದಿದ್ದು, ಪ್ರತಿಯೊಬ್ಬರು ಕೈ ಜೋಡಿಸಬೇಕು’ ಎಂದು ಸಚಿವ ನಾಗೇಶ್ ನುಡಿದರು. 
 
‘ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಎರಡು ತಿಂಗಳ ಹಿಂದೆಯೇ ಆರಂಭಿಸಿದೆ. ಪರೀಕ್ಷಾ ಮಂಡಳಿ ಅಧಿಕಾರಿಗಳ ಜೊತೆ ಹಲವು ಸುತ್ತಿನ ಸಭೆ ನಡೆಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸೂಚನೆ ನೀಡಲಾಗಿದೆ’ ಎಂದು ಸಚಿವ ನಾಗೇಶ್ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments