ಸದನದಲ್ಲಿ ಧ್ವನಿಸಿದ ರೈತರ ಬಂಧನ ಪ್ರಕರಣ

geetha
ಬುಧವಾರ, 14 ಫೆಬ್ರವರಿ 2024 (19:42 IST)
ಬೆಂಗಳೂರು : ದೆಹಲಿಗೆ  ಪ್ರತಿಭಟನೆಗಾಗಿ ತೆರಳುತ್ತಿದ್ದ ರೈತರನ್ನು ದೇಶಾದ್ಯಂತ ಬಂಧಿಸಲಾಗಿದೆ. ಈ ಪೈಕಿ ಕರ್ನಾಟಕದ ರೈತರೂ ಸಹ ಸೆರೆಯಾಗಿದ್ದು ಅವರ ಬಿಡುಗಡೆಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ರೈತ  ಸಂಘದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸದನದಲ್ಲಿ ದನಿಯತ್ತಿದರು. 70 ಬಂಧಿತ ರೈತರ ಪೈಕಿ 25 ಮಂದಿ ಮಹಿಳೆಯರೂ ಇದ್ದಾರೆ. ರೈತರ ಬಂಧನ ಖಂಡನೀಯ  ಅವರ ಬಿಡುಗಡೆಗೆ ಸರ್ಕಾರ ಕೂಡಲೇ ಪ್ರಯತ್ನಿಸಬೇಕು ಎಂದು ಅವರು ಸ್ಪೀಕರ್‌ ಬಳಿ ಮನವಿ ಮಾಡಿದರು.

ಪ್ರತಿಭಟನೆ ಹಾಗೂ ಧರಣಿಗಳು ಜನಸಾಮಾನ್ಯರ ಹಕ್ಕು ಎಂದು ಇದಕ್ಕೆ ಮಹದೇವಪ್ಪ ಉತ್ತರ ನೀಡಿದರು.ಸರ್ಕಾರ  ಈ ಬಗ್ಗೆ ಈಗಾಗಲೇ ಕ್ರಮಕ್ಕೆ ಮುಂದಾಗಿದೆ. ಖುದ್ದು ಮುಖ್ಯಮಂತ್ರಿ ಹಾಗೂ ಗೃಹಸಚಿವರೇ ಈ ಬಗ್ಗೆ ಸಭೆಗೆ ಸ್ಪಷ್ಟೀಕರಣ ನೀಡಲಿದ್ದಾರೆ ಎಂದರು. ಸಭಾಪತಿ ಯು.ಟಿ. ಖಾದರ್‌ ಮಾತನಾಡಿ, ದೆಹಲಿಗೆ ತೆರಳುತ್ತಿದ್ದ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿದೆ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರದೇಶ ಸರ್ಕಾರದ ಜೊತೆ ಮಾತನಾಡಿ ರೈತರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments