ಅತ್ಯಾಚಾರ ಎಸಗಿದ ಗಂಟೆಯೊಳಗೆ ಆರೋಪಿ ಅರೆಸ್ಟ್

Webdunia
ಶನಿವಾರ, 18 ಸೆಪ್ಟಂಬರ್ 2021 (12:56 IST)
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಮಾತನಾಡಲು ಬಾರದ ಮಹಿಳೆ ಮೇಲೆ ಕಾಮುಕ ಅತ್ಯಾಚಾರ ಎಸಗಿದ್ದು, ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆತನನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ ಸಂಬಂಧಿಕರು ಮತ್ತು ಸಾರ್ವಜನಿಕರು ಆರೋಪಿಯನ್ನು ಕೋರ್ಟಿಗೆ ಕರೆದುಕೊಂಡು ಹೋಗದೆ ನಮ್ಮ ಎದುರಲ್ಲೇ ಶೂಟ್ ಮಾಡಬೇಕು. ಇಲ್ಲದಿದ್ದರೆ ನಮ್ಮ ವಶಕ್ಕೆ ಕೊಡಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ. ಆಕ್ರೋಶಗೊಂಡ ಜನ ಆರೋಪಿ ಮೇಲೆ ದಾಳಿ ಮಾಡಲು ಮುಂದಾದಾಗ ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
ಚಿತ್ರದುರ್ಗ ತಾಲೂಕು ಲಕ್ಷ್ಮೀಸಾಗರದ ನಾಗರಾಜ ಬಂಧಿತ ಆರೋಪಿಯಾಗಿದ್ದಾನೆ. ಲಾರಿ ಚಾಲಕನಾಗಿರುವ ಗುರುವಾರ ರಾತ್ರಿ ಹೊಳಲ್ಕೆರೆ ಸಮೀಪದ ತುಪ್ಪದಹಳ್ಳಿ ಗ್ರಾಮಕ್ಕೆ ಬಸ್ ನಲ್ಲಿ ಬಂದು ಲಂಬಾಣಿಹಟ್ಟಿ ತಾಂಡಕ್ಕೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ರಾತ್ರಿ 9.30 ವೇಳೆ ಮಹಿಳೆಯೊಂದಿಗೆ ಬಸ್ ನಲ್ಲಿ ಬಂದಿದ್ದ ನಾಗರಾಜ ಆಕೆಯನ್ನು ಹಿಂಬಾಲಿಸಿಕೊಂಡು ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತನಿಂದ ತಪ್ಪಿಸಿಕೊಂಡ ಮಹಿಳೆ ಗ್ರಾಮಕ್ಕೆ ಓಡಿದ್ದಾಳೆ. ಮಾಹಿತಿ ಪಡೆದ ಪೊಲೀಸರು ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಬಂದ ಸಂದರ್ಭದಲ್ಲಿ ಸಂಬಂಧಿಕರು ಠಾಣೆ ಎದುರು ಪ್ರತಿಭಟನೆ ನಡೆಸಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಥವರು ಇನ್ನಷ್ಟಾಗಬೇಕು.. ಸುಂಟರಗಾಳಿಗೆ ಒದ್ದಾಡುತ್ತಿದ್ದ ತಾಯಿ ಮಗುವನ್ನು ನೋಡಿ ಈ ವ್ಯಕ್ತಿ ಮಾಡಿದ್ದೇನು Video

ಡಿಕೆ ಶಿವಕುಮಾರ್ ಜೊತೆ ಪ್ರಮಾಣ ವಚನ ಸ್ವೀಕರಿಸಲಿರುವ 13 ಸಚಿವರು ಇವರೇ: ಖರ್ಗೆ ಪುತ್ರನಿಗೆ ದೊಡ್ಡ ಸ್ಥಾನ ಸಾಧ್ಯತೆ

ಪ್ರಮಾಣ ವಚನಕ್ಕೆ ಕೆಲವೇ ಕ್ಷಣಗಳ ಮೊದಲು ಯಡಿಯೂರಪ್ಪ ನಿವಾಸಕ್ಕೆ ಡಿಕೆ ಶಿವಕುಮಾರ್: ಅಚ್ಚರಿಯ ಬೆಳವಣಿಗೆ

ಡಿಕೆ ಶಿವಕುಮಾರ್ ಜೀವನದ ಪವರ್ ಫುಲ್ ಮಹಿಳೆ ಯಾರು ಗೊತ್ತಾ

ಹುಡುಗಿ ಕೆನ್ನೆ ಮುಟ್ಟಬೇಕು ಎನ್ನುವಾಗ ಡಿಸ್ಟರ್ಬ್ ಮಾಡ್ತೀರಲ್ಲೋ: ಸಖತ್ ವೈರಲ್ ಆಗಿರುವ Video

ಮುಂದಿನ ಸುದ್ದಿ
Show comments