Webdunia - Bharat's app for daily news and videos

Install App

ನಿವೇಶನ ಕೊಡಿಸೋದಾಗಿ ಕೋಟ್ಯಂತರ ಹಣ ವಂಚಿಸಿದ ಭೂಪ ಅರೆಸ್ಟ್

Webdunia
ಬುಧವಾರ, 7 ಆಗಸ್ಟ್ 2019 (16:36 IST)
ನಿವೇಶನ ಕೊಡಿಸೋದಾಗಿ ಜನರಿಗೆ ಮಕ್ಮಲ್ ಟೋಪಿ ಹಾಕಿ ಕೋಟ್ಯಂತರ ರೂಪಾಯಿ ವಂಚಿಸಿದ ಪರಾರಿಯಾಗಿದ್ದ ಭೂಪನೊಬ್ಬ ಕೊನೆಗೆ ಅರೆಸ್ಟ್ ಆಗಿದ್ದಾನೆ.

ನಿವೇಶನ ಕೊಡಿಸುವುದಾಗಿ ಹೇಳಿ ಪೊಲೀಸರು ಸೇರಿದಂತೆ ಸುಮಾರು 40 ಕ್ಕೂ ಜನರಿಗೆ ವಂಚನೆ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ನಗರದ ಬಿ.ಎಲ್.ಗೌಡ ಬಡಾವಣೆಯ ಸಿದ್ದೇಶ್ ಬಂಧಿತ ಆರೋಪಿ. ಈತ ನಗರದ ಡಿಎಆರ್ ಪೊಲೀಸರು ಸೇರಿದಂತೆ ಸಾರ್ವಜನಿಕರಿಂದ ಹಣ ಪಡೆದು ಕಡಿಮೆ ದರದಲ್ಲಿ ಹಲವೆಡೆ ಬಡಾವಣೆ ನಿರ್ಮಿಸುತ್ತಿರುವುದಾಗಿ ಹೇಳಿದ್ದ.  ನಿವೇಶನ ಕೊಡಿಸುವುದಾಗಿ ಹೇಳಿ 2014 ರಿಂದ ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ನಂತರ ಪರಾರಿಯಾಗಿದ್ದ.

ಸತೀಶ್ ಎಂಬುವವರು ನೀಡಿದ ದೂರಿನನ್ವಯ ನಗರ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿ ಸಿದ್ದೇಶನನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments