Webdunia - Bharat's app for daily news and videos

Install App

ಆಪ್ತಮಿತ್ರ ಸಿನಿಮಾ ಕತೆ ಹೇಳಿ ಯುವತಿಗೆ ವಂಚಿಸಿದ ಜ್ಯೋತಿಷಿ ಅರೆಸ್ಟ್

Webdunia
ಬುಧವಾರ, 21 ಆಗಸ್ಟ್ 2019 (12:12 IST)
ಬೆಂಗಳೂರು : ಆಪ್ತಮಿತ್ರ ಸಿನಿಮಾದ ಕತೆಯಂತೆ ಮರುಜನ್ಮದ ಕತೆ ಹೇಳಿ ಯುವತಿಯೊಬ್ಬಳನ್ನು ಜ್ಯೋತಿಷಿಯೊಬ್ಬ ಯಾಮಾರಿಸಿ ವಂಚನೆ ಮಾಡಿದ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ.




ಸ್ವಾಮಿ ವೆಂಕಟ ಕೃಷ್ಣಾಚಾರ್ಯ (28)  ಡೋಂಗಿ ಜ್ಯೋತಿಷಿಯಾಗಿದ್ದು, ಈತ ಶ್ರೀನಿವಾಸನಗರದ ಮನೆಯೊಂದರಲ್ಲಿ ವಾಸ್ತುದೋಷವಿದೆ ಎಂದು ಹೋಮ ಮಾಡಿಸಿ ಅದೇ ಮನೆ ಯುವತಿಯೊಂದಿಗೆ ಚಾಟಿಂಗ್ ಮಾಡುತ್ತಿದ್ದ. ಕಳೆದ ಜನ್ಮದಲ್ಲಿ ನಾವಿಬ್ಬರೂ ಗಂಡ ಹೆಂಡತಿಯಾಗಿದ್ದೆವು. ಕಳೆದ ಜನ್ಮದಲ್ಲಿ ನೀನು ಭರತನಾಟ್ಯದ ಕಲಾವಿದೆಯಾಗಿದ್ದೆ. ನಾನೇ ನಿನ್ನ ಸಾವಿಗೆ ಕಾರಣನಾಗಿದ್ದೆ. ಈ ಜನ್ಮದಲ್ಲಿ ಕಾರಣಾಂತರಗಳಿಂದ ದೂರ ಆಗಿದ್ದೇವೆ. ನೀನು ನನ್ನ ಮದುವೆಯಾದಾಗ ಮಾತ್ರ ನನಗೆ ಮೋಕ್ಷ ಎಂದು ಆ ಯುವತಿಯ ಬಳಿ ಪುನರ್ಜನ್ಮದ ಕತೆ ಹೇಳಿ ಜ್ಯೋತಿಷಿ ಆ ಯುವತಿಯನ್ನು ನಂಬಿಸಿದ್ದ.


ಅಲ್ಲದೇ ಆಕೆಯನ್ನೇ ಮದುವೆಯಾಗುವುದಾಗಿ ನಂಬಿಸಿ, ಆಕೆಯ ಹೆಸರಲ್ಲಿ 30 ಲಕ್ಷ ಸಾಲ ಪಡೆದಿದ್ದ. ಪೊಲೀಸರಿಗೆ ದೂರು ನೀಡಿದರೆ ತನ್ನ ತಪೋಶಕ್ತಿಯಿಂದ ಕೈ-ಕಾಲು ಬೀಳಿಸುವುದಾಗಿ ಆಕೆ ಹಾಗೂ ಆಕೆಯ ಮನೆಯವರಿಗೆ ಬೆದರಿಕೆಯೊಡ್ಡಿದ್ದ. ಆದರೆ ಇದೀಗ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಯುವತಿಯ ಪೋಷಕರು ದೂರು ದಾಖಲಿಸಿದ ಹಿನ್ನಲೆಯಲ್ಲಿ ಇದೀಗ ಪೊಲೀಸರು ಸ್ವಾಮೀಜಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments