ಸಿಟಿ ರವಿಯನ್ನು ಕೊಲೆಗಡುಕ ಎಂದ ಲಕ್ಷ್ಮೀ ಹೆಬ್ಬಾಳ್ಕರ್‌, ಬೆಂಬಲಿಗರನ್ನು ಅರೆಸ್ಟ್ ಮಾಡಿ: ಜನಾರ್ದನ ರೆಡ್ಡಿ

Sampriya
ಶುಕ್ರವಾರ, 20 ಡಿಸೆಂಬರ್ 2024 (16:57 IST)
Photo Courtesy X
ಕೊಪ್ಪಳ: ಎಂಎಲ್‌ಸಿ ಸಿ.ಟಿ ರವಿ ಅವರನ್ನು ಕೊಲೆಗಡುಕ ಎಂದು ಕರೆದಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಬೆಂಬಲಿಗರನ್ನು ಬಂಧಿಸಬೇಕೆಂದು ಶಾಸಕ ಜನಾರ್ದನ ರೆಡ್ಡಿ ಒತ್ತಾಯ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ ಓರ್ವ ಸಂಭಾವಿತ ರಾಜಕಾರಣಿ. ಉತ್ತಮ ರಾಜಕಾರಣಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಅವರ ಪ್ರಾಣಕ್ಕೆ ಅಪಾಯ ತರುವ ಕೆಲಸ ಮಾಡಿದ್ದಾರೆ.

ಈ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಕುಗ್ಗುವ ಕೆಲಸ ಮಾಡಿದ್ದಾರೆ. ಸಭಾಪತಿಗಳೇ ಯಾವುದೇ ರೆಕಾರ್ಡ್ ಇಲ್ಲಾ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರಿಗೆ ವಿನಾಶಕಾಲೇ ವಿಪರೀತ ಬುದ್ಧಿ ಬಂದಿದೆ. ಯಾವುದೋ ವಿಡಿಯೋ ತೋರಿಸಿ ಸಿ.ಟಿ ರವಿ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಸಿಟಿ ರವಿ ಅವರನ್ನು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಬೆಂಬಲಿಗರು ಕೊಲೆಗಡುಕ ಎಂದು ಕರೆದಿದ್ದಾರೆ. ಹಾಗಾದರೆ ಅವರು ಕೊಲೆ ಮಾಡಿದ್ದಾರೆ. ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments