Webdunia - Bharat's app for daily news and videos

Install App

ಮಕ್ಕಳಿಗೆ ಸಿಹಿತಿಂಡಿ ನೀಡಿ ಅಪಹರಿಸುತ್ತಿದ್ದ ಕತರ್ನಾಕ್ ಕಳ್ಳರ ಗ್ಯಾಂಗ್ ಅರೆಸ್ಟ್

Webdunia
ಸೋಮವಾರ, 4 ನವೆಂಬರ್ 2019 (07:45 IST)
ಬೆಂಗಳೂರು : ಸಿಹಿತಿಂಡಿ ನೀಡಿ ಚಿಕ್ಕ ಮಕ್ಕಳನ್ನು ಅಪಹರಿಸುತ್ತಿದ್ದ ಕತರ್ನಾಕ್ ಕಳ್ಳರ ಗ್ಯಾಂಗ್ ನ್ನು ಬೆಂಗಳೂರಿನ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.




ಲೋಕೇಶ್(40)ಬಂಧಿತ ಆರೋಪಿಯಾಗಿದ್ದು, ಈತನಿಗೆ ಸಹಕರಿಸುತ್ತಿದ್ದ ತಂಗಿ ಹಾಗೂ ಆಕೆಯ ಗಂಡನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಕೂಲಿ ಕಾರ್ಮಿಕರ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದ್ದ ಲೋಕೇಶ್ ಅಪಹರಣ ಮಾಡುವ ಮೊದಲೇ ಮಕ್ಕಳಿಗೆ ಸಿಹಿತಿಂಡಿ ನೀಡಿ ಅವರ ಫೋಟೋ ತೆಗೆದು ಮಕ್ಕಳನ್ನು ಕೊಂಡುಕೊಳ್ಳುವವರಿಗೆ ತೋರಿಸಿ ಯಾವ ಮಗು ಬೇಕೆಂದು ನಿಗದಿಪಡಿಸಿ ಹಣವನ್ನು ಪಡೆದು ಬಳಿಕ ಆಟೋದಲ್ಲಿ ಬಂದು ಮಗುವನ್ನು ಅಪಹರಿಸುತ್ತಿದ್ದ.


ಹೀಗೆ ಆತ ಕೂಲಿ ಕಾರ್ಮಿಕರಾದ ದೇವಮ್ಮ ಹಾಗೂ ಚೆನ್ನಪ್ಪ ದಂಪತಿಯ ಮಗುವನ್ನು ಅಪಹರಿಸಿದ್ದರಿಂದ ಮಗುವಿನ ತಂದೆತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಲೋಕೇಶ್ ಮಗುವನ್ನು ಅಪಹರಿಸಿ ಕರೆದುಕೊಂಡು ಹೋಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಾಗೇ ಈ ಕೃತ್ಯಕ್ಕೆ  ಆತನ ತಂಗಿ ಹಾಗೂ ಆಕೆಯ ಗಂಡನ ಸಹಕಾರವಿದ್ದ ಹಿನ್ನಲೆ ಅವರನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments