ಕುಡಿದ ಮತ್ತಿನಲ್ಲಿ ಪರಿಚಿತನನ್ನ ಹತ್ಯೆಗೈದ ಬಾಲಪರಾಧಿಯ ಬಂಧನ

Webdunia
ಶನಿವಾರ, 5 ನವೆಂಬರ್ 2022 (17:18 IST)
ಕುಡಿದ ಅಮಲಿನಲ್ಲಿ ಪರಿಚಿತನನ್ನ ಹತ್ಯೆಗೈದಿದ್ದ ಬಾಲಾಪರಾಧಿಯ ಬಂದಿಸುವಲ್ಲಿ ಕುಮಾರಸ್ವಾಮಿ ‌ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ.ಅ.21ರಂದು ಕೆ.ಎಸ್.ಲೇಔಟ್ ಠಾಣಾ ವ್ಯಾಪ್ತಿಯ ಕಾಶಿನಗರ ಸರ್ಕಲ್ ನಲ್ಲಿ‌ ಮರದ ದೊಣ್ಣೆಯಿಂದ ಮುಖೇಶ್ ಎಂಬಾತನ ತಲೆಗೆ ಹೊಡೆದು ಹತ್ಯೆಗೈಯ್ಯಲಾಗಿತ್ತು,ಕೊಲೆಯಾದ ಮುಖೇಶ್ ಹಾಗೂ ಆರೋಪಿ ಇಬ್ಬರೂ ಸಹ ಬಿಹಾರ ಮೂಲದವರಾಗಿದ್ದು ಕಳೆದ ಹಲವು ವರ್ಷಗಳ ಹಿಂದೆ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು.ಮೊದಲಿಗೆ ಮೃತ ಮುಖೇಶ್ ಸಿಲಿಕಾನ್ ಸಿಟಿಗೆ ಬಂದಿದ್ದ ತನ್ನ ಊರಿನವನೇ ಎಂದು ಆರೋಪಿಯನ್ನ ಟೈಲ್ಸ್ ವರ್ಕ್ ಕೆಲಸಕ್ಕೆ ಕರೆದುಕೊಂಡು ಬಂದಿದ್ದ. ಆರಂಭದಲ್ಲಿ ಇಬ್ಬರು ಕೂಡ ಕೆಲಸ ಮಾಡಿಕೊಂಡಿದ್ರು.ಇಬ್ಬರೂ ಸಹ ಕಾಶಿನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಉಳಿದುಕೊಳ್ಳುತ್ತಿದ್ದರು.ಅಕ್ಟೋಬರ್ 21ರಂದು ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆ ಆರಂಭವಾಗಿತ್ತು. ಇದರಿಂದ. ರೊಚ್ಚಿಗೆದ್ದ ಆರೋಪಿ ದೊಣ್ಣೆಯಿಂದ ತಲೆಗೆ ಹೊಡೆದು ಮುಖೇಶ್ ನನ್ನ ಕೊಲೆಗೈದಿದ್ದ ನಂತರ , ರಾತ್ರೋರಾತ್ರಿ ಸ್ಥಳದಿಂದ ಕಾಲ್ಕಿತ್ತಿದ್ದ ಆರೋಪಿ ಪಾಟ್ನಾ ರೈಲು ಹತ್ತಿ ಊರು ಸೇರಿದ್ದ .ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಕೆ.ಎಸ್.ಲೇಔಟ್ ಪೊಲೀಸರು.ನಂತರ ಈಗ ಕೊನೆಗೂ ಕುಮಾರಸ್ವಾಮಿ ಲೇಔಟ್ ಪೊಲೀಸರು ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments