Webdunia - Bharat's app for daily news and videos

Install App

ನಕಲಿ ಚಿನ್ನ ವಂಚಕನ ಬಂಧನ

Webdunia
ಬುಧವಾರ, 21 ಜೂನ್ 2023 (17:26 IST)
ಗ್ರಾಹಕರು ಬ್ಯಾಂಕ್‍ನಲ್ಲಿ ಗಿರಿವಿ ಇಟ್ಟಿದ್ದ ಚಿನ್ನವನ್ನು ಕಳ್ಳತನ ಮಾಡಿ, ನಕಲಿ ಚಿನ್ನ ತಂದಿಟ್ಟ ಆರೋಪದ ಮೇಲೆ ಬ್ಯಾಂಕ್ ಸಿಬ್ಬಂದಿಯೊಬ್ಬನನ್ನು ಬಂಧಿಸಿದ ಪ್ರಕರಣ ಹಾಸನದ ಬೆಳವಾಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲವ ಬಿ.ಎನ್ ಎಂದು ಗುರುತಿಸಲಾಗಿದೆ. ಆರೋಪಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದಾನೆ. ಅಲ್ಲದೇ ಆ ಜಾಗದಲ್ಲಿ ನಕಲಿ ಚಿನ್ನವನ್ನು ತಂದಿಟ್ಟಿದ್ದ ಎಂದು ಬ್ಯಾಂಕ್‍ನ ಪ್ರಧಾನ ವ್ಯವಸ್ಥಾಪಕಿ ಅನುರಾಧ ಅವರು ಆರೋಪಿಸಿದ್ದಾರೆ. ಆರೋಪಿ ಬೆಳವಾಡಿ ಗ್ರಾಮದ SBI ಶಾಖೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ. ಬ್ಯಾಂಕ್ ಅಧಿಕಾರಿಗಳ ಜೊತೆ ವಿಶ್ವಾಸಗಳಿಸಿ 2013 ರಿಂದ ಚಿನ್ನದ ಸಾಲದ ದಾಸ್ತಾನು ಉಸ್ತುವಾರಿ ವಹಿಸಿಕೊಂಡಿದ್ದ. ಇದನ್ನೇ ದುರ್ಬಳಕೆ ಮಾಡಿಕೊಂಡು ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಗಿರವಿ ವಿಭಾಗದ ಚಿನ್ನವನ್ನು ಪರಿಶೀಲನೆ ಮಾಡಿದ ವೇಳೆ ವಂಚನೆ ಬಯಲಾಗಿದೆ. 30 ಪ್ಯಾಕೆಟ್ ಚಿನ್ನದಲ್ಲಿ 18 ಪ್ಯಾಕೆಟ್ ಚಿನ್ನದಲ್ಲಿ ನಕಲಿ ಚಿನ್ನ ಇರುವುದು ಪತ್ತೆಯಾಗಿತ್ತು. ಅದರಲ್ಲಿ 2 ಪ್ಯಾಕೆಟ್ ಚಿನ್ನವನ್ನು ಸಂಪೂರ್ಣ ಕಳ್ಳತನ ಮಾಡಲಾಗಿದೆ. ಉಳಿದ ಪ್ಯಾಕೆಟ್‍ಗಳಲ್ಲಿ ಕೆಲವು ಚಿನ್ನದ ಆಭರಣವನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ನಡೆಯುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments