Webdunia - Bharat's app for daily news and videos

Install App

ನಕಲಿ ಚಿನ್ನ ವಂಚಕನ ಬಂಧನ

Webdunia
ಬುಧವಾರ, 21 ಜೂನ್ 2023 (17:26 IST)
ಗ್ರಾಹಕರು ಬ್ಯಾಂಕ್‍ನಲ್ಲಿ ಗಿರಿವಿ ಇಟ್ಟಿದ್ದ ಚಿನ್ನವನ್ನು ಕಳ್ಳತನ ಮಾಡಿ, ನಕಲಿ ಚಿನ್ನ ತಂದಿಟ್ಟ ಆರೋಪದ ಮೇಲೆ ಬ್ಯಾಂಕ್ ಸಿಬ್ಬಂದಿಯೊಬ್ಬನನ್ನು ಬಂಧಿಸಿದ ಪ್ರಕರಣ ಹಾಸನದ ಬೆಳವಾಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲವ ಬಿ.ಎನ್ ಎಂದು ಗುರುತಿಸಲಾಗಿದೆ. ಆರೋಪಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದಾನೆ. ಅಲ್ಲದೇ ಆ ಜಾಗದಲ್ಲಿ ನಕಲಿ ಚಿನ್ನವನ್ನು ತಂದಿಟ್ಟಿದ್ದ ಎಂದು ಬ್ಯಾಂಕ್‍ನ ಪ್ರಧಾನ ವ್ಯವಸ್ಥಾಪಕಿ ಅನುರಾಧ ಅವರು ಆರೋಪಿಸಿದ್ದಾರೆ. ಆರೋಪಿ ಬೆಳವಾಡಿ ಗ್ರಾಮದ SBI ಶಾಖೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ. ಬ್ಯಾಂಕ್ ಅಧಿಕಾರಿಗಳ ಜೊತೆ ವಿಶ್ವಾಸಗಳಿಸಿ 2013 ರಿಂದ ಚಿನ್ನದ ಸಾಲದ ದಾಸ್ತಾನು ಉಸ್ತುವಾರಿ ವಹಿಸಿಕೊಂಡಿದ್ದ. ಇದನ್ನೇ ದುರ್ಬಳಕೆ ಮಾಡಿಕೊಂಡು ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಗಿರವಿ ವಿಭಾಗದ ಚಿನ್ನವನ್ನು ಪರಿಶೀಲನೆ ಮಾಡಿದ ವೇಳೆ ವಂಚನೆ ಬಯಲಾಗಿದೆ. 30 ಪ್ಯಾಕೆಟ್ ಚಿನ್ನದಲ್ಲಿ 18 ಪ್ಯಾಕೆಟ್ ಚಿನ್ನದಲ್ಲಿ ನಕಲಿ ಚಿನ್ನ ಇರುವುದು ಪತ್ತೆಯಾಗಿತ್ತು. ಅದರಲ್ಲಿ 2 ಪ್ಯಾಕೆಟ್ ಚಿನ್ನವನ್ನು ಸಂಪೂರ್ಣ ಕಳ್ಳತನ ಮಾಡಲಾಗಿದೆ. ಉಳಿದ ಪ್ಯಾಕೆಟ್‍ಗಳಲ್ಲಿ ಕೆಲವು ಚಿನ್ನದ ಆಭರಣವನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ನಡೆಯುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments