Webdunia - Bharat's app for daily news and videos

Install App

ಸದಾಶಿವನಗರದಲ್ಲಿ ಜಾಲಿ ರೈಡ್ ಮಾಡುತ್ತಿದವರ ಬಂಧನ

Webdunia
ಸೋಮವಾರ, 13 ಸೆಪ್ಟಂಬರ್ 2021 (20:41 IST)
ನಗರದಲ್ಲಿ ಜಾಲಿ ರೈಡ್ ಹಾವಳಿ ಹೆಚ್ಚುತ್ತಿದ್ದು, ಶುಕ್ರವಾರ ರಾತ್ರಿ ಯುವಕ ಹಾಗೂ ಯುವತಿಯರು ಮರ್ಸಿಡೀಸ್ ಬೆಂಝ್ ಕಾರಿನಲ್ಲಿ ರಾಕ್ ಮ್ಯೂಸಿಕ್ ಹಾಕಿಕೊಂಡು ಜಾಲಿ ರೈಡ್ ಮಾಡುತ್ತಿದ್ದ ಐಷಾರಾಮಿ ಕಾರೊಂದನ್ನು ಸದಾಶಿವನಗರ ಸಂಚಾರ ಠಾಣೆ ಪೆÇಲೀಸರು ವಶಕ್ಕೆ ಪಡೆದಿದ್ದಾರೆ.  
ಸದಾಶಿವನಗರದ ಯುವಕರು ತಡರಾತ್ರಿ ಕಾರಿನ ಮೇಲಿನ ರೋಪ್ ತೆಗೆದು ಡ್ಯಾನ್ಸ್ ಮಾಡುತ್ತಾ ಪೆÇಲೀಸರ ಎದುರಿಗೆ ಕೂಗಾಡುತ್ತಾ ಅತಿವೇಗವಾಗಿ ಕಾರು ಚಲಾಯಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಎಲ್ಲೆಡೆ ವೈರಲ್ ಆಗುತ್ತಿದೆ. ಸ್ಯಾಂಕಿ ಟ್ಯಾಂಕ್ ಪಕ್ಕದ ರಸ್ತೆಯಲ್ಲಿ ಘಟನೆ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. 
ತುರ್ತು ಅಗತ್ಯ ಸೇವೆ ಫಲಕ: 
ಯುವಕರು ವಿದ್ಯುತ್ ಕಂಪನಿಯೊಂದರ ಸಿಬ್ಬಂದಿಗಳೆಂದು ಹೇಳಿಕೊಳ್ಳುವುದರ ಜತೆಗೆ ತಮ್ಮ ಕಾರಿನ ಮುಂದೆ ತುರ್ತು ಅಗತ್ಯ ಸೇವೆ ಫಲಕ ಹಾಕಿಕೊಂಡು ಜಾಲಿ ರೈಡ್ ಮಾಡಿದ್ದಾರೆ. ಕಾರಿನ ಹಿಂಭಾಗ ಸೋಹಮ್ ರಿನವೆಬಲ್ ಎನರ್ಜಿ ಪ್ರೈ.ಲಿ. ನಾಮಫಲಕ ಹಾಕಿಕೊಂಡು ಸದಾಶಿವನಗರದ ಹಲವು ಭಾಗಗಳಲ್ಲಿ ಜಾಲಿ ರೈಡಿ ಮಾಡಿದ್ದಾರೆ. ಹೀಗಾಗಿ, ನೈಟ್ ಕಫ್ರ್ಯೂ ಉಲ್ಲಂಘಿಸಿ ಸಂಚಾರ ಮಾಡಿರುವ ಕಾರಣ ಎನ್‍ಡಿಎಂಎ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಕಾರು ಜಪ್ತಿ ಮಾಡಲಾಗಿದೆ ಎಂದು ಪೆÇಲೀಸರು ತಿಳಿಸಿದರು. 
ಈ ಹಿಂದೆ ಇದೇ ರೀತಿ ಹೊಸೂರು ಶಾಸಕ ಪ್ರಕಾಶ್ ಅವರ ಪುತ್ರ ಕರುಣಾಕರ ಹಾಗೂ ಆತನ ಪ್ರೇಯಸಿ ಬಿಂದು ಸೇರಿದಂತೆ ಆರು ಮಂದಿ ಆಡಿ ಕ್ಯೂ-3 ಕಾರಿನಲ್ಲಿ ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ಕೋರಮಂಗಲದಲ್ಲಿ ಜಾಲಿ ರೈಡ್ ಮಾಡಿದ್ದರು. ಈ ವೇಳೆ ಮಂಗಳ ಕಲ್ಯಾಣ ಮಂಟಪದ ಬಳಿ ಕಾರು ಅಪಘಾತಕ್ಕೀಡಾಗಿ ಏಳು ಮಂದಿಯೂ ಸಾವನ್ನಪ್ಪಿದ್ದರು. ಇದೀಗ ಮತ್ತೆ ಸದಾಶಿವನಗರದಲ್ಲಿ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ಉಂಟು ಮಾಡಿದೆ. ಪೆÇಲೀಸರ ಕರ್ತವ್ಯ ನಿರ್ವಹಣೆ ಬಗ್ಗೆಯೂ ಸಾರ್ವಜನಿಕ ವಲಯ ಸಂಶಯ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments